Sunday, May 3, 2026
Sunday, May 3, 2026

ಹಿಂದುಸ್ಥಾನಿ ಸಂಗೀತ ರಸ ಗ್ರಹಣ ಶಿಬಿರ

ಹಿಂದುಸ್ಥಾನಿ ಸಂಗೀತ ರಸ ಗ್ರಹಣ ಶಿಬಿರ

Date:

ಮಣಿಪಾಲ, ಏ.10: ಹಲವು ಘರಾನಗಳು, ಪ್ರಕಾರ, ಪ್ರಯೋಗಗಳನ್ನೊಳಗೊಂಡ ಹಿಂದೂಸ್ತಾನಿ ಸಂಗೀತವು, ಈ ಕಾರಣಗಳಿಂದಲೇ ಶ್ರೀಮಂತವೂ ಹಾಗೂ ವೈವಿಧ್ಯಪೂರ್ಣವೂ ಆಗಿದೆ ಎಂದು ವಿದುಷಿ ಶ್ರೀಮತಿದೇವಿ ಹೇಳಿದರು. ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆಂಡ್ ಸೈನ್ಸಸ್ (ಜಿಸಿಪಿಎಎಸ್) ನ ಆಶ್ರಯದಲ್ಲಿ ತಮ್ಮ ಎರಡು ದಿನಗಳ ಹಿಂದುಸ್ಥಾನಿ ಸಂಗೀತ ರಸ ಗ್ರಹಣ ಶಿಬಿರದಲ್ಲಿ ಮಾತನಾಡುತ್ತಾ ವಿದುಷಿ ಶ್ರೀಮತಿದೇವಿಯವರು, ಗ್ವಾಲಿಯರ್, ಜೈಪುರ, ಆಗ್ರಾ, ಕಿರಾಣಾ ಮುಂತಾದ ಘರಾನಗಳು, ಖಮಾಲ್, ಠುಮ್ರಿ, ಠಪ್ಜಾ ಇತ್ಯಾದಿ ಪ್ರಕಾರಗಳು, ಅಲ್ಲಾದಿಯಾ ಖಾನ್, ಭೀಮಸೇನ್ ಜೋಶಿ, ಮಲ್ಲಿಕಾರ್ಜುನ ಮನ್ಸೂರ್, ಕುಮಾರ ಗಂಧರ್ವ, ಕಿಶೋರಿ ಅಮೋನ್ಕರ್, ಪರ್ವಿನ್ ಸುಲ್ತಾನಾ ಅಂಥವರ ಪ್ರಯೋಗಗಳೆಲ್ಲ ಸೇರಿ, – ಶ್ರೀಮಂತ ಮತ್ತು ವೈವಿಧ್ಯಪೂರ್ಣವಾಗಿದೆ ಎಂದು ಹೇಳಿದರು. ತಮ್ಮ ಎರಡು ದಿನಗಳ ಶಿಬಿರದಲ್ಲಿ ಹಿಂದೂಸ್ತಾನಿ ಸಂಗೀತದ ಸ್ವರ, ಲಯ, ರಾಗ- ಇತ್ಯಾದಿ ಸೂಕ್ಷ್ಮಗಳನ್ನು ವಿವರಿಸಿದ ಅವರು, ತಮ್ಮ ಪ್ರಾತ್ಯಕ್ಷಿಕೆಯ ಮೂಲಕ ಘರಾನಾ-ಪ್ರಕಾರ-ಪ್ರಯೋಗಗಳ ವ್ಯತ್ಯಾಸಗಳನ್ನು ಪ್ರಸ್ತುತ ಪಡಿಸಿದರು. ಹಿಂದೂಸ್ತಾನಿ ಸಂಗೀತದ ಬೆಳವಣಿಗೆಯ ಹಿಂದೆ ಹಲವು ಪ್ರತಿಭೆಗಳು ಕೆಲಸ ಮಾಡಿದ್ದನ್ನು ವಿವರಿಸಿದ ಅವರು, ಹಿಂದೂಸ್ತಾನಿ ಸಂಗೀತವು ಮತಧರ್ಮಗಳ ಚೌಕಟ್ಟನ್ನು ಮೀರಿ ಬೆಳೆದಿದೆ ಎಂದು ನುಡಿದರು.

ಜಿಸಿಪಿಎಎಸ್ ಮುಖ್ಯಸ್ಥ ಪ್ರೊ. ವರದೇಶ್ ಹಿರೇಗಂಗೆ, ಹಿಂದೂಸ್ತಾನಿ ಸಂಗೀತ ಭಾರತೀಯ ಸಂಸ್ಕೃತಿಯ ಅತ್ಯುತ್ತಮ ಪ್ರತಿನಿಧಿಯಾಗಿದೆ ಎಂದರು. ಡಾ. ರಾಜಾರಾಮ್ ತೊಲ್ಪಾಡಿ, ಡಾ. ಶ್ರೀಕುಮಾರ್, ಪ್ರೊ.ನೇಮಿರಾಜ್ ಶೆಟ್ಟಿ, ಡಾ. ಭ್ರಮರಿ ಶಿವಪ್ರಕಾಶ್, ಡಾ. ನಿರಂಜನ, ಡಾ. ಪ್ರಭಾಕರ ಮಲ್ಯ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೃಹ ಸಚಿವ ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ

ನವದೆಹಲಿ, ಮೇ 2: ಖ್ಯಾತ ನಟ ರಿಷಬ್ ಶೆಟ್ಟಿ ಅವರು ಕೇಂದ್ರ...

ಮೇ 5: ಮಣಿಪಾಲದಲ್ಲಿ ನೇರ ಸಂದರ್ಶನ

ಉಡುಪಿ, ಮೇ 2: ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ...

ಆರೋಗ್ಯ ಸೇವೆಗಳು ಅಗತ್ಯ ವ್ಯಕ್ತಿಗಳಿಗೆ ಲಭ್ಯವಾಗುವಂತೆ ಕ್ರಮ ವಹಿಸಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಮೇ.2: ಆಯುಷ್ಮಾನ್ ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲಾ ಆಸ್ಪತ್ರೆಗಳಿಂದ ಹೆಚ್ಚಿನ...

ತೆಂಕನಿಡಿಯೂರು ಕಾಲೇಜಿಗೆ ಪಿ.ಜಿ.ಆರ್. ಸಿಂಧ್ಯಾ ಭೇಟಿ

ಮಲ್ಪೆ, ಮೇ 2: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ...
error: Content is protected !!