Friday, February 27, 2026
Friday, February 27, 2026

ಕೆಮ್ಮಣ್ಣು: ಬ್ಯಾಡ್ಮಿಂಟನ್ ತರಬೇತಿ ಶಿಬಿರ ಸಂಪನ್ನ

ಕೆಮ್ಮಣ್ಣು: ಬ್ಯಾಡ್ಮಿಂಟನ್ ತರಬೇತಿ ಶಿಬಿರ ಸಂಪನ್ನ

Date:

ಕೆಮ್ಮಣ್ಣು, ಏ.12: ಕೆಮ್ಮಣ್ಣು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಲಯನ್ಸ್ ಕ್ಲಬ್ ಕಲ್ಯಾಣಪುರ ಹಾಗೂ ಅಜ್ಜರಕಾಡು ಬ್ಯಾಡ್ಮಿಂಟನ್ ಕ್ಲಬ್ ಇವರ ಸಹಯೋಗದಲ್ಲಿ ಶಟಲ್ ಬ್ಯಾಡ್ಮಿಂಟನ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ಅಧ್ಯಕ್ಷತೆಯನ್ನು ಸತೀಶ್ ಶೆಟ್ಟಿ ಅಧ್ಯಕ್ಷರು ಕಾಲೇಜು ಅಭಿವೃದ್ಧಿ ವಿಭಾಗ ಇವರು ವಹಿಸಿದ್ದರು. ಶಟಲ್ ಬ್ಯಾಡ್ಮಿಂಟನ್ ತರಬೇತುದಾರರಾದ ಸುರೇಶ್ ಬನ್ನಂಜೆ ಇವರನ್ನು ಗೌರವಿಸಲಾಯಿತು. ತರಬೇತಿಯಲ್ಲಿ ಪಾಲ್ಗೊಂಡ ಎಲ್ಲ ವಿದ್ಯಾರ್ಥಿಗಳಿಗೂ ಪ್ರಶಸ್ತಿ ಪತ್ರವನ್ನು ನೀಡಲಾಯಿತು.

ಮುಖ್ಯ ಅತಿಥಿಗಳಾಗಿ ಮಾಜಿ ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ನಂದಕಿಶೋರ್ ಕೆಮ್ಮಣ್ಣು, ಲಯನ್ಸ್ ಕ್ಲಬ್ ಕಲ್ಯಾಣಪುರ ಅಧ್ಯಕ್ಷರಾದ ರೊನಾಲ್ಡ್, ಅಜ್ಜರಕಾಡು ಬ್ಯಾಡ್ಮಿಂಟನ್ ಕ್ಲಬ್ ಅಧ್ಯಕ್ಷರಾದ ಹಿರಿಯ ನ್ಯಾಯವಾದಿ ಗಣೇಶ್ ಕುಮಾರ್ ಮಟ್ಟು, ಕಾಲೇಜಿನ ಪ್ರಾಂಶುಪಾಲರಾದ ಲಕ್ಷ್ಮೀನಾರಾಯಣ, ಶಾಲಿನಿ ಶೆಟ್ಟಿ ಉಡುಪಿ ಅಥ್ಲೆಟಿಕ್ ಕೋಚ್, ಅಜ್ಜರಕಾಡು ಬ್ಯಾಡ್ಮಿಂಟನ್ ಕ್ಲಬ್ ನ ಸದಸ್ಯರಾದ ದೀಪಕ್ ಕುಮಾರ್, ಶಾಲಾ ಹಿತರಕ್ಷಣಾ ಸಮಿತಿಯ ಗೌರವಾಧ್ಯಕ್ಷರಾದ ನರಸಿಂಹಮೂರ್ತಿ, ಹಳೆ ವಿದ್ಯಾರ್ಥಿ ಬಾಲಕೃಷ್ಣ, ಯಾದವ ನಾಯ್ಕ, ದೈಹಿಕ ಶಿಕ್ಷಣ ಶಿಕ್ಷಕಿ ಅನಿತಾ ಉಪಸ್ಥಿತರಿದ್ದರು. ಹೈಸ್ಕೂಲ್ ವಿಭಾಗದ ಮುಖ್ಯಸ್ಥೆ ವಂದನ ಸ್ವಾಗತಿಸಿ, ಇಂಗ್ಲಿಷ್ ಶಿಕ್ಷಕಿ ಗ್ರೇಸಿ ಬಾಂಜಿ ವಂದಿಸಿದರು. ಕನ್ನಡ ಭಾಷಾ ಶಿಕ್ಷಕಿ ಶಾಲಿನಿ ಕೆ.ಎನ್ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹಿರಿಯಡಕ: ಉದ್ಯೋಗ ಮೇಳ

ಹಿರಿಯಡಕ, ಫೆ.27: ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಉದ್ಯೋಗ ಮಾಹಿತಿ...

ಹಲವಾರು ಕ್ಷೇತ್ರಗಳಲ್ಲಿ ಭಾರತ-ಇಸ್ರೇಲ್ ಒಪ್ಪಂದ

ನವದೆಹಲಿ, ಫೆ.27: ಭಾರತ ಮತ್ತು ಇಸ್ರೇಲ್ ಸಾಂಸ್ಕೃತಿಕ ವಿನಿಮಯ, ಭೂಭೌತಿಕ ಪರಿಶೋಧನೆ,...

90,000 ಕೋಟಿ ರೂಪಾಯಿಗಳ ಒಪ್ಪಂದಗಳಿಗೆ ಜಪಾನ್ ಕಂಪನಿಗಳೊಂದಿಗೆ ಉತ್ತರ ಪ್ರದೇಶ ಸರ್ಕಾರ ಸಹಿ

ಯು.ಬಿ.ಎನ್.ಡಿ., ಫೆ.27: ಉತ್ತರ ಪ್ರದೇಶ ಸರ್ಕಾರವು ಜಪಾನಿನ ವಿವಿಧ ಕಂಪನಿಗಳೊಂದಿಗೆ 90...

ಎನ್.ಸಿ.ಪಿ. ರಾಷ್ಟ್ರೀಯ ಅಧ್ಯಕ್ಷರಾಗಿ ಸುನೇತ್ರಾ ಪವಾರ್ ಆಯ್ಕೆ

ಮುಂಬಯಿ, ಫೆ.27: ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ (ಎನ್.ಸಿ.ಪಿ.) ಮಹಾರಾಷ್ಟ್ರ ಉಪಮುಖ್ಯಮಂತ್ರಿ ಸುನೇತ್ರಾ...
error: Content is protected !!