Thursday, July 30, 2026
Thursday, July 30, 2026

ಮಣೂರು ದೇಗುಲದ ರಥೋತ್ಸವ ಸಂಪನ್ನ

ಮಣೂರು ದೇಗುಲದ ರಥೋತ್ಸವ ಸಂಪನ್ನ

Date:

ಕೋಟ, ಏ.13: ಮಣೂರು ರಾಷ್ಟ್ರೀಯ ಹೆದ್ದಾರಿಯ ಸನಿಹದಲ್ಲಿರುವ ಮಣೂರು ಶ್ರೀ ಮಹಾಲಿಂಗೇಶ್ವರ ಹೇರಂಭ ಮಹಾಗಣಪತಿ ದೇಗುಲದ ವಾರ್ಷಿಕ ರಥೋತ್ಸವ ಶನಿವಾರ ಸಂಪನ್ನಗೊಂಡಿತು. ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ಹೆಚ್ ಕುಂದರ್ ರಥೋತ್ಸವಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ಸುಮಾರು ಒಂದೂವರೆ ಕಿ.ಮೀ ಸಂಚರಿಸಿದ ರಥೋತ್ಸವದಲ್ಲಿ ಕೀಲು ಕುದುರೆ, ವಿವಿಧ ರೀತಿಯ ಗೊಂಬೆಗಳು, ಸ್ತಬ್ಧ ಚಿತ್ರಗಳು, ಕೇರಳ ಚೆಂಡೆ, ವಾದ್ಯಘೋಷಗಳು, ತಟ್ಟಿರಾಯ ಹೀಗೆ ವಿವಿಧ ರೀತಿಯ ವಿಶೇಷತೆಗಳು ರಥೋತ್ಸವದಲ್ಲಿ ಕಂಡುಬಂತು.

ಟ್ರಸ್ಟಿಗಳಾದ ರವಿ ಐತಾಳ್, ಅಶೋಕ್ ಶೆಟ್ಟಿ, ದಿವ್ಯ ಪ್ರಭು, ಅಚ್ಯುತ್ ಹಂದೆ, ಕೃಷ್ಣ ದೇವಾಡಿಗ, ಸುಫಲ ಶೆಟ್ಟಿ, ದಿನೇಶ್ ಆಚಾರ್, ಚಂದ್ರ ಹರ್ತಟ್ಟು, ಜೀರ್ಣೋದ್ಧಾರ ಸಮಿತಿಯ ಪ್ರಮುಖರಾದ ಅರುಣಾಚಲ ಮಯ್ಯ, ವಿಷ್ಣುಮೂರ್ತಿ ಮಯ್ಯ, ಮಹೇಶ್ ಹೊಳ್ಳ, ಗೋಪಾಲ ಪೈ, ರಾಜೇಂದ್ರ ಉರಾಳ, ಸೇರಿದಂತೆ ಸಹಸ್ರಾರು ಮಂದಿ ರಥೋತ್ಸವದಲ್ಲಿ ಭಾಗಿಯಾದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ, ಜು.29: ಲೋಕಸಭೆ ಬುಧವಾರ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ)...

ಶಾಸಕ ಯಶ್ಪಾಲ್ ಸುವರ್ಣ ಅವರಿಗೆ ನೋಟೀಸ್

ಉಡುಪಿ, ಜು.29: ರಾಹುಲ್ ಗಾಂಧಿ ವಿರುದ್ಧ ಶಾಸಕ ಯಶ್ಪಾಲ್ ಸುವರ್ಣ ಅವರು...

ಹಡಪದ ಅಪ್ಪಣ್ಣ ರವರ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪ: ಮಂಜುನಾಥ ಪೂಜಾರಿ

ಉಡುಪಿ, ಜು.29: ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ...

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...
error: Content is protected !!