Friday, July 31, 2026
Friday, July 31, 2026

ರಕ್ತೇಶ್ವರಿ ದೇಗುಲದ ವರ್ಧಂತಿ ಉತ್ಸವ ಸಂಪನ್ನ

ರಕ್ತೇಶ್ವರಿ ದೇಗುಲದ ವರ್ಧಂತಿ ಉತ್ಸವ ಸಂಪನ್ನ

Date:

ಕೋಟ, ಏ.13: ಸಾಸ್ತಾನದ ಪಾಂಡೇಶ್ವರದ ರಕ್ತೇಶ್ವರಿ ದೇಗುಲದ ವಾರ್ಷಿಕ ವರ್ಧಂತಿ ಉತ್ಸವ ಶನಿವಾರ ಸಂಪನ್ನಗೊಂಡಿತು. ದೇಗುಲದಲ್ಲಿ ಪೂರ್ವಾಹ್ನ ಸಾಮೂಹಿಕ ಪ್ರಾರ್ಥನೆ, ರಕ್ತೇಶ್ವರಿ ಹಾಗೂ ನಾಗಾಧಿ ಪರಿವಾರ ದೇವರಿಗೆ ನವಕ ಕುಂಭ ಸ್ಥಾಪನೆ, ಬ್ರಹ್ಮಲಿಂಗ ದೇವರಿಗೆ ಶತರುದ್ರ, ದುರ್ಗಾಹೋಮ, ಕಲಶಾಭಿಷೇಕ, ತುಲಾಭಾರ ಸೇವೆ, ಮಹಾಮಂಗಳಾರತಿ ಪ್ರಸಾದ ವಿತರಣೆ ಕಾರ್ಯಕ್ರಮಗಳು ಜರಗಿದವು. ದೇಗುಲದ ಧರ್ಮದರ್ಶಿ ಕೆ.ವಿ ರಮೇಶ್ ರಾವ್ ಪಾಂಡೇಶ್ವರ ಇವರ ಸಮ್ಮುಖದಲಿ ನಡೆದ ಧಾರ್ಮಿಕ ಕಾರ್ಯಕ್ರಮಗಳು ವೇ.ಮೂ ರತ್ನಾಕರ ಸೋಮಯಾಜಿ ನೇತೃತ್ವದಲ್ಲಿ ಜರಗಿತು.

ಅಪರಾಹ್ನ ಮಹಾಅನ್ನಸಂತರ್ಪಣೆ, ಸಂಜೆ ರಕ್ತೇಶ್ವರಿ ದೇವಿಗೆ ಪೂಜೆ, ವಿಶೇಷ ಸರ್ವಾಲಂಕಾರ ಪೂಜೆ, ದೀಪೋತ್ಸವ ಕಾರ್ಯಕ್ರಮಗಳು ನಡೆಯಿತು. ಭಕ್ತಾಧಿಗಳಿಗೆ ಪನವಾರ ಪ್ರಸಾದ ವಿತರಣೆ ನಡೆಯಿತು. ರಾತ್ರಿ ಕಳವಾರ ಬಾಳ ಬೆಂಕಿನಾಥೇಶ್ವರ ಮೇಳದಿಂದ ರಕ್ತೇಶ್ವರಿ ಮಹಾತ್ಮೆ ಯಕ್ಷಗಾನ ಪ್ರಸಂಗ ಪ್ರದರ್ಶನಗೊಂಡಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕ್ರೀಡಾ ಇಲಾಖೆ ವಿವಿಧ ಯೋಜನೆ: ಅರ್ಜಿ ಅವಧಿ ವಿಸ್ತರಣೆ

ಉಡುಪಿ, ಜು.30: 2025ನೇ ಸಾಲಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ...

ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಅರ್ಜಿ ಆಹ್ವಾನ

ಉಡುಪಿ, ಜು.30: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ವಿಪ್ರ ಸ್ವ-ಉದ್ಯಮ...

ಕೋಟತಟ್ಟು ಪಡುಕರೆ ಹಾಲು ಉತ್ಪಾದಕರ ವಾರ್ಷಿಕ ಮಹಾಸಭೆ

ಕೋಟ, ಜು.30: ಕೋಟತಟ್ಟು ಪಡುಕರೆ ಹಾಲು ಉತ್ಪಾದಕರ ವಾರ್ಷಿಕ ಮಹಾಸಭೆಯು ಮಂಗಳವಾರ...

ಬಾರ್ಕೂರು: ‘ಸಾಹಿತ್ಯ ಮತ್ತು ಜೀವನ ದರ್ಶನ’ ವಿಶೇಷ ಉಪನ್ಯಾಸ

ಬಾರ್ಕೂರು, ಜು.30: ಶ್ರೀಮತಿ ರುಕ್ಮಿಣಿ ಶೆಟ್ಟಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ...
error: Content is protected !!