Saturday, January 17, 2026
Saturday, January 17, 2026

ಪಂಚವರ್ಣ: 250ನೇ ವಾರದ ಸ್ವಚ್ಛತಾ ಅಭಿಯಾನ

ಪಂಚವರ್ಣ: 250ನೇ ವಾರದ ಸ್ವಚ್ಛತಾ ಅಭಿಯಾನ

Date:

ಕೋಟ, ಏ.13: ಪ್ಲಾಸ್ಟಿಕ್ ಯಾವತ್ತು ಈ ಭೂಮಿಯ ಮೇಲೆ ಹುಟ್ಟಿಕೊಂಡಿತು, ಅಂದಿನಿಂದ ಇಲ್ಲಿಯವರೆಗೆ ಭೂಮಿಗೆ ಕಂಠಕವಾಗಿ ಪರಿಣಮಿಸಿದೆ ಎಂದು ಅರಣ್ಯ ಇಲಾಖೆ ಉಡುಪಿ ವಲಯ ಅಧಿಕಾರಿ ಮಲ್ತೇಶ್ ಅಳಲಗಿರಿ ಹೇಳಿದರು. ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಇದರ ನೇತೃತ್ವದಲ್ಲಿ ಪಂಚವರ್ಣ ಹಂದಟ್ಟು ಮಹಿಳಾ ಬಳಗ, ಮಣೂರು ಫ್ರೆಂಡ್ಸ್ , ಜೆಸಿಐ. ಸಿನಿಯರ್ ಕೋಟ ಲಿಜನ್, ಕೋಟತಟ್ಟು ಗ್ರಾ.ಪಂ ಸಹಭಾಗಿತ್ವದಲ್ಲಿ ಅರಣ್ಯ ಇಲಾಖೆ ಉಡುಪಿ ವಲಯ ಸಂಯೋಜನೆಯೊಂದಿಗೆ ಕೋಟತಟ್ಟು ಪಡುಕರೆ ಬೀಚ್‌ನಲ್ಲಿ 250ನೇ ಭಾನುವಾರದ ಸ್ವಚ್ಛತಾ ಅಭಿಯಾನದಲ್ಲಿ ಸ್ವಚ್ಛತಾ ಸಂದೇಶ ನೀಡಿ ಮಾತನಾಡಿದರು.

ಪಂಚವರ್ಣ ಸಂಸ್ಥೆಗಳ ಹಾಗೆ ಸಂಘಟನೆಗಳು ಗಲ್ಲಿ ಗಲ್ಲಿಗಳಲ್ಲಿ ಹುಟ್ಟಿಕೊಳ್ಳಬೇಕು, ಆಗ ಸದೃಢ ಸಮಾಜ ಕಟ್ಟಲು ಸಾಧ್ಯ ಎಂದರು. ಉಡುಪಿ ವಲಯ ಅರಣ್ಯ ಇಲಖೆಯ ಅಧಿಕಾರಿಗಳಾದ ಉದಯ ಕುಮಾರ್, ರಮೇಶ್ ಕೋಟ, ಶ್ರೀನಿವಾಸ ಜೋಗಿ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ.ಮನೋಹರ್ ಪೂಜಾರಿ, ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಉಪಾಧ್ಯಕ್ಷೆ ಪುಷ್ಭ ಕೆ ಹಂದಟ್ಟು ಉಪಸ್ಥಿತರಿದ್ದರು. ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ಸ್ವಾಗತಿಸಿ ನಿರೂಪಿಸಿದರು. ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!