Thursday, August 20, 2026
Thursday, August 20, 2026

ಪಂಚವರ್ಣ: 250ನೇ ವಾರದ ಸ್ವಚ್ಛತಾ ಅಭಿಯಾನ

ಪಂಚವರ್ಣ: 250ನೇ ವಾರದ ಸ್ವಚ್ಛತಾ ಅಭಿಯಾನ

Date:

ಕೋಟ, ಏ.13: ಪ್ಲಾಸ್ಟಿಕ್ ಯಾವತ್ತು ಈ ಭೂಮಿಯ ಮೇಲೆ ಹುಟ್ಟಿಕೊಂಡಿತು, ಅಂದಿನಿಂದ ಇಲ್ಲಿಯವರೆಗೆ ಭೂಮಿಗೆ ಕಂಠಕವಾಗಿ ಪರಿಣಮಿಸಿದೆ ಎಂದು ಅರಣ್ಯ ಇಲಾಖೆ ಉಡುಪಿ ವಲಯ ಅಧಿಕಾರಿ ಮಲ್ತೇಶ್ ಅಳಲಗಿರಿ ಹೇಳಿದರು. ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಇದರ ನೇತೃತ್ವದಲ್ಲಿ ಪಂಚವರ್ಣ ಹಂದಟ್ಟು ಮಹಿಳಾ ಬಳಗ, ಮಣೂರು ಫ್ರೆಂಡ್ಸ್ , ಜೆಸಿಐ. ಸಿನಿಯರ್ ಕೋಟ ಲಿಜನ್, ಕೋಟತಟ್ಟು ಗ್ರಾ.ಪಂ ಸಹಭಾಗಿತ್ವದಲ್ಲಿ ಅರಣ್ಯ ಇಲಾಖೆ ಉಡುಪಿ ವಲಯ ಸಂಯೋಜನೆಯೊಂದಿಗೆ ಕೋಟತಟ್ಟು ಪಡುಕರೆ ಬೀಚ್‌ನಲ್ಲಿ 250ನೇ ಭಾನುವಾರದ ಸ್ವಚ್ಛತಾ ಅಭಿಯಾನದಲ್ಲಿ ಸ್ವಚ್ಛತಾ ಸಂದೇಶ ನೀಡಿ ಮಾತನಾಡಿದರು.

ಪಂಚವರ್ಣ ಸಂಸ್ಥೆಗಳ ಹಾಗೆ ಸಂಘಟನೆಗಳು ಗಲ್ಲಿ ಗಲ್ಲಿಗಳಲ್ಲಿ ಹುಟ್ಟಿಕೊಳ್ಳಬೇಕು, ಆಗ ಸದೃಢ ಸಮಾಜ ಕಟ್ಟಲು ಸಾಧ್ಯ ಎಂದರು. ಉಡುಪಿ ವಲಯ ಅರಣ್ಯ ಇಲಖೆಯ ಅಧಿಕಾರಿಗಳಾದ ಉದಯ ಕುಮಾರ್, ರಮೇಶ್ ಕೋಟ, ಶ್ರೀನಿವಾಸ ಜೋಗಿ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ.ಮನೋಹರ್ ಪೂಜಾರಿ, ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಉಪಾಧ್ಯಕ್ಷೆ ಪುಷ್ಭ ಕೆ ಹಂದಟ್ಟು ಉಪಸ್ಥಿತರಿದ್ದರು. ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ಸ್ವಾಗತಿಸಿ ನಿರೂಪಿಸಿದರು. ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹಿರಿಯಡಕ: ದೇವರಾಜು ಅರಸು ಅವರ 111ನೇ ಜನ್ಮ ದಿನಾಚರಣೆ

ಹಿರಿಯಡಕ, ಆ.20: ಸಾಮಾಜಿಕ ನ್ಯಾಯ ಮತ್ತು ಸಾಮಾಜಿಕ ಸಮಾನತೆಯ ಪ್ರಜಾಸತ್ತಾತ್ಮಕ ಹೊಣೆಗಾರಿಕೆಗಳನ್ನು...

ತೆಂಕನಿಡಿಯೂರು: ಮೂರು ದಿನಗಳ ಉದ್ಯಮಶೀಲತಾ ಅರಿವಿನ ಕಾರ್ಯಗಾರ ಉದ್ಘಾಟನೆ

ಉಡುಪಿ, ಆ 20: ಪ್ರಸ್ತುತ ಕೃತಕ ಬುದ್ಧಿಮತ್ತೆಯೊಂದಿಗಿನ ಸ್ಪರ್ಧಾತ್ಮಕ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು...

ಬಾಳೆಹಣ್ಣು ಹಣ್ಣಾಗಿಸಲು ಹಾನಿಕಾರಕ ರಾಸಾಯನಿಕ ಬಳಕೆ: ಬಾಳೆಹಣ್ಣಿನ ದಾಸ್ತಾನು ಕೇಂದ್ರಗಳ ಮೇಲೆ ಅಧಿಕಾರಿಗಳಿಂದ ದಾಳಿ

ಉಡುಪಿ, ಆ.20: ಹಾನಿಕಾರಕ ರಾಸಾಯನಿಕಗಳನ್ನು ಬಳಸಿದ ಆಹಾರ ಪದಾರ್ಥಗಳಿಂದ ಕ್ಯಾನ್ಸರ್ ಇತ್ಯಾದಿ...

ಆ. 21: ಜ್ಞಾನಸುಧಾ ಸಂಸ್ಥಾಪಕ ದಿ. ಗೋಪ ಶೆಟ್ಟಿಯವರ 105ನೇ ಹುಟ್ಟುಹಬ್ಬ: ರಕ್ತದಾನ ಶಿಬಿರ; ವಿಶೇಷ ಮಕ್ಕಳ ಶಾಲಾ ಅಧ್ಯಾಪಕರಿಗೆ ಸನ್ಮಾನ

ಕಾರ್ಕಳ, ಆ.20: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ವತಿಯಿಂದ ಜ್ಞಾನಸುಧಾ ಶಿಕ್ಷಣ...
error: Content is protected !!