Saturday, March 21, 2026
Saturday, March 21, 2026

ಪಂಚವರ್ಣ: 250ನೇ ವಾರದ ಸ್ವಚ್ಛತಾ ಅಭಿಯಾನ

ಪಂಚವರ್ಣ: 250ನೇ ವಾರದ ಸ್ವಚ್ಛತಾ ಅಭಿಯಾನ

Date:

ಕೋಟ, ಏ.13: ಪ್ಲಾಸ್ಟಿಕ್ ಯಾವತ್ತು ಈ ಭೂಮಿಯ ಮೇಲೆ ಹುಟ್ಟಿಕೊಂಡಿತು, ಅಂದಿನಿಂದ ಇಲ್ಲಿಯವರೆಗೆ ಭೂಮಿಗೆ ಕಂಠಕವಾಗಿ ಪರಿಣಮಿಸಿದೆ ಎಂದು ಅರಣ್ಯ ಇಲಾಖೆ ಉಡುಪಿ ವಲಯ ಅಧಿಕಾರಿ ಮಲ್ತೇಶ್ ಅಳಲಗಿರಿ ಹೇಳಿದರು. ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಇದರ ನೇತೃತ್ವದಲ್ಲಿ ಪಂಚವರ್ಣ ಹಂದಟ್ಟು ಮಹಿಳಾ ಬಳಗ, ಮಣೂರು ಫ್ರೆಂಡ್ಸ್ , ಜೆಸಿಐ. ಸಿನಿಯರ್ ಕೋಟ ಲಿಜನ್, ಕೋಟತಟ್ಟು ಗ್ರಾ.ಪಂ ಸಹಭಾಗಿತ್ವದಲ್ಲಿ ಅರಣ್ಯ ಇಲಾಖೆ ಉಡುಪಿ ವಲಯ ಸಂಯೋಜನೆಯೊಂದಿಗೆ ಕೋಟತಟ್ಟು ಪಡುಕರೆ ಬೀಚ್‌ನಲ್ಲಿ 250ನೇ ಭಾನುವಾರದ ಸ್ವಚ್ಛತಾ ಅಭಿಯಾನದಲ್ಲಿ ಸ್ವಚ್ಛತಾ ಸಂದೇಶ ನೀಡಿ ಮಾತನಾಡಿದರು.

ಪಂಚವರ್ಣ ಸಂಸ್ಥೆಗಳ ಹಾಗೆ ಸಂಘಟನೆಗಳು ಗಲ್ಲಿ ಗಲ್ಲಿಗಳಲ್ಲಿ ಹುಟ್ಟಿಕೊಳ್ಳಬೇಕು, ಆಗ ಸದೃಢ ಸಮಾಜ ಕಟ್ಟಲು ಸಾಧ್ಯ ಎಂದರು. ಉಡುಪಿ ವಲಯ ಅರಣ್ಯ ಇಲಖೆಯ ಅಧಿಕಾರಿಗಳಾದ ಉದಯ ಕುಮಾರ್, ರಮೇಶ್ ಕೋಟ, ಶ್ರೀನಿವಾಸ ಜೋಗಿ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ.ಮನೋಹರ್ ಪೂಜಾರಿ, ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಉಪಾಧ್ಯಕ್ಷೆ ಪುಷ್ಭ ಕೆ ಹಂದಟ್ಟು ಉಪಸ್ಥಿತರಿದ್ದರು. ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ಸ್ವಾಗತಿಸಿ ನಿರೂಪಿಸಿದರು. ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮ್ಯಾಜಿಕ್ ಜಾರ್

ನಾವೆಲ್ಲ ದಿನಾಲು ಅನೇಕ ಋಣಾತ್ಮಕ ಭಾವನೆಗಳಿಂದ ತೋಲಾಡುತ್ತಿರುತ್ತೇವೆ. ಭಾರವಾದ ಮನಸ್ಸು, ಕೆಲಸದಲ್ಲಿ...

ತೆಂಕನಿಡಿಯೂರು ಕಾಲೇಜು: ಬಿ.ಎಸ್.ಡಬ್ಲ್ಯೂ ವಿದ್ಯಾರ್ಥಿನಿಗೆ ಪ್ರಥಮ ರ‍್ಯಾಂಕ್‌

ಉಡುಪಿ, ಮಾ.21: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...

ಕತಾರ್ ದೊರೆಗೆ ಈದ್ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ನವದೆಹಲಿ, ಮಾ.20: ಪ್ರಧಾನಿ ನರೇಂದ್ರ ಮೋದಿ ಕತಾರ್ ದೊರೆ ಶೇಖ್ ತಮೀಮ್...

ಇಸ್ರೇಲ್‌ನ ತೈಲ ಸಂಸ್ಕರಣಾಗಾರದ ಮೇಲೆ ಇರಾನ್ ಕ್ಷಿಪಣಿ ದಾಳಿ

ಯು.ಬಿ.ಎನ್.ಡಿ., ಮಾ.20: ಹೈಫಾದ ಉತ್ತರ ನಗರದಲ್ಲಿರುವ ತೈಲ ಸಂಸ್ಕರಣಾಗಾರದ ಮೇಲೆ ಇರಾನಿನ...
error: Content is protected !!