Saturday, September 21, 2024
Saturday, September 21, 2024

ಏ. 30- ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕ್ರತಿಕ ಪ್ರತಿಷ್ಠಾನದ 5ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ- ದೇವಿ ಮಹಾತ್ಮೆ ಯಕ್ಷಗಾನ

ಏ. 30- ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕ್ರತಿಕ ಪ್ರತಿಷ್ಠಾನದ 5ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ- ದೇವಿ ಮಹಾತ್ಮೆ ಯಕ್ಷಗಾನ

Date:

ಉಡುಪಿ: ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕ್ರತಿಕ  ಪ್ರತಿಷ್ಠಾನದ ವತಿಯಿಂದ ನಡೆಯುತ್ತಿರುವ ಉಚಿತ ತೆಂಕುತಿಟ್ಟು ಯಕ್ಷಗಾನ ತರಗತಿಯು  ಶ್ರೀ ಸೋದೆ ಮಠದ ಯತಿಗಳ ಕೃಪಾಶೀರ್ವಾದದಿಂದ ಯಶಸ್ವಿಯಾಗಿ ಐದು  ಸಂವತ್ಸರಗಳನ್ನು ಪೂರೈಸಿದೆ.

ಇದರ 5ನೇ ವರ್ಷದ  ವಾರ್ಷಿಕೋತ್ಸವವು ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಏಪ್ರಿಲ್ 30 ಶನಿವಾರದಂದು ಸಂಜೆ 7 ಗಂಟೆಗೆ ಜರಗಲಿದೆ.

ಈ ಪ್ರಯುಕ್ತ ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಶ್ರೀ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಮತ್ತು ಸೋದೆ ವಾದಿರಾಜ ಮಠದ ಶ್ರೀ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮವು ಜರಗಲಿದೆ.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕಟೀಲು ಕ್ಷೇತ್ರದ ಲಕ್ಷ್ಮೀನಾರಾಯಣ ಅಸ್ರಣ್ಣ, ಎಂ ಎಲ್ ಸಾಮಗ, ಶ್ರೀನಿವಾಸ ಕಳವಾರು ಪೆರ್ಮುದೆ ಅವರು ಪಾಲ್ಗೊಳ್ಳಲಿದ್ದಾರೆ. 

ಪ್ರತಿಷ್ಠಾನದ ಪ್ರವರ್ತಕರಾದ ಗೋಪಿಕಾ ಮಯ್ಯ ಮತ್ತು ಸತೀಶ್ ಮಯ್ಯ ಹಾಗೂ ಯಕ್ಷ ಗುರು ಶ್ರೀ ರಾಕೇಶ್ ರೈ ಅಡ್ಕ ಉಪಸ್ಥಿತರಿರುವರು.

ಯಕ್ಷಗುರು ರಾಕೇಶ್ ರೈ ಅಡ್ಕ ಇವರ ಶಿಷ್ಯಂದಿರಿಂದ ಸಂಜೆ 7 ಗಂಟೆಯಿಂದ ‘ಶ್ರೀ ದೇವಿ ಮಹಾತ್ಮೆ’  ಎಂಬ ಯಕ್ಷಗಾನ ಪ್ರದರ್ಶನ ಇರುವುದು.

ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕ್ರತಿಕ ಪ್ರತಿಷ್ಠಾನವು 100ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ತೆಂಕುತಿಟ್ಟು ಯಕ್ಷಗಾನ ತರಬೇತಿಯನ್ನು ಗುರು ರಾಕೇಶ್ ರೈ ಅಡ್ಕ ಇವರ ಮೂಲಕ ಉಚಿತವಾಗಿ ನೀಡುತ್ತಿದೆ.

ಪ್ರತಿಷ್ಠಾನದ ಈ ಸತ್ಕಾರ್ಯಕ್ಕೆ ಸೋದೆ ಮಠದ ಶ್ರೀ ಶ್ರೀ ವಿಶ್ವವಲ್ಲಭ ಶ್ರೀಪಾದರು ತಮ್ಮ ಮಠದಲ್ಲಿ ಸ್ಥಳಾವಕಾಶವನ್ನು ಕಲ್ಪಿಸಿಕೊಟ್ಟು ಈ ಕಾರ್ಯವನ್ನು ಪೋಷಿಸುತ್ತಾ ಬಹುವಾಗಿ ಅನುಗ್ರಹಿಸುತ್ತಿದ್ದಾರೆ.

ಆಸಕ್ತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಪ್ರತಿಷ್ಠಾನದ ವತಿಯಿಂದ ಕೋರಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!