Saturday, September 21, 2024
Saturday, September 21, 2024

ಮಕ್ಕಳ ಪ್ರತಿಭೆ ಅನಾವರಣಕ್ಕೆ ಬೇಸಿಗೆ ಶಿಬಿರ ಉತ್ತಮ ವೇದಿಕೆ: ಶರ್ಮಿಳಾ ಎಸ್

ಮಕ್ಕಳ ಪ್ರತಿಭೆ ಅನಾವರಣಕ್ಕೆ ಬೇಸಿಗೆ ಶಿಬಿರ ಉತ್ತಮ ವೇದಿಕೆ: ಶರ್ಮಿಳಾ ಎಸ್

Date:

ಉಡುಪಿ: ಬೇಸಿಗೆ ಶಿಬಿರಗಳು ಮಕ್ಕಳ ಪ್ರತಿಭೆಯ ಅನಾವರಣಕ್ಕೆ ಉತ್ತಮ ವೇದಿಕೆಯಾಗಿದ್ದು, ಅನುಭವಿ ತರೆಬೇತುದಾರರಿಂದ ಉತ್ತಮ ತರಬೇತಿ ದೊರೆಯಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಉಡುಪಿ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಹೇಳಿದರು.

ಅವರು ಇಂದು ಬಾಲಭವನ ಸೊಸೈಟಿ ಬೆಂಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಉಡುಪಿ ಜಿಲ್ಲೆ ಇದರ ಸಹಯೋಗದಲ್ಲಿ ನಡೆದ ಬೇಸಿಗೆ ಶಿಬಿರದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಬೇಸಿಗೆ ಶಿಬಿರವು ಮಕ್ಕಳ ಕಲಿಕಾ ಬೆಳವಣಿಗೆಗೆ ಸಹಕಾರಿಯಾಗಿದ್ದು, ಇಲ್ಲಿ ಮಕ್ಕಳ ದೈನಂದಿನ ಕಲಿಕೆಯ ಬದಲಾಗಿ ಆಟ, ಮೈಂಡ್ ಗೇಮ್, ಕಲೆ, ಸಂಸ್ಕೃತಿ ಹಾಗೂ ಹೊಸ-ಹೊಸ ವಿಷಯಗಳ ಅರಿವಾಗುತ್ತದೆ. ಇದರಿಂದ ಮಕ್ಕಳಲ್ಲಿ ಹೊಸ ಜವಾಬ್ದಾರಿಯ ಜೊತೆಗೆ ಆತ್ಮವಿಶ್ವಾಸ ಮೂಡಲು ಸಹಕಾರಿಯಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್ ಮಾತನಾಡಿ, ಸಣ್ಣ ವಯಸ್ಸಿನಲ್ಲಿಯೇ ಮಕ್ಕಳ ಆಸಕ್ತಿಯ ವಿಷಯಕ್ಕೆ ಹೆಚ್ಚು ಪ್ರಾಮುಖ್ಯತೆ ಕೊಡುವುದು ಬಹಳ ಅನಿವಾರ್ಯ. ಇಂತಹ ಶಿಬಿರಗಳ ಮೂಲಕ ಮಕ್ಕಳಲ್ಲಿನ ಆಸಕ್ತಿ ಗುರುತಿಸಲು ಸಾಧ್ಯ ಎಂದರು.

ಕೋವಿಡ್ ಸಮಸ್ಯೆಯಿಂದ ಕಳೆದ ಎರಡು ವರ್ಷಗಳಲ್ಲಿ ಇಂತಹ ಯಾವುದೇ ಚಟುವಟಿಕೆಗಳು ನಡೆದಿರಲಿಲ್ಲ ಇದರಿಂದಾಗಿ ಮಕ್ಕಳು ಮೊಬೈಲ್ ಪ್ರಭಾವಕ್ಕೆ ಒಳಗಾಗಿದ್ದಾರೆ. ಮೊಬೈಲ್‍ನ್ನು ಅವಶ್ಯಕತೆಗೆ ತಕ್ಕಷ್ಟು ಮಾತ್ರ ಬಳಕೆ ಮಾಡಬೇಕು, ಪೋಷಕರು ಮಕ್ಕಳ ಕಲಿಕೆಯ ಮೇಲೆ ಯಾವುದೇ ರೀತಿಯ ಒತ್ತಡ ಹೇರದೆ ಅವರ ಆಸಕ್ತಿಯ ವಿಷಯಕ್ಕೆ ಸಹಕರಿಸುವ ಜೊತೆಗೆ ಸರಿಯಾದ ಮಾರ್ಗದರ್ಶಕರಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಶಿರಿಬೀಡು ವಾರ್ಡ್ ನಗರಸಭೆ ಸದಸ್ಯ ಟಿ.ಜಿ. ಹೆಗ್ಡೆ ಸೇರಿದಂತೆ ಇತರೆ ಗಣ್ಯರು ಬಾಗವಹಿಸಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಕಿ ವೀಣಾ ವಿವೇಕಾನಂದ ಸ್ವಾಗತಿಸಿ, ಜಿಲ್ಲಾ ಮಹಿಳಾ ಶಕ್ತಿ ಕೇಂದ್ರದ ಸಂಯೋಜಕಿ ಶಾರದ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!