Home ಸುದ್ಧಿಗಳು ಪ್ರಾದೇಶಿಕ ಉಡುಪಿ: ಪುನೀತ್ ರಾಜಕುಮಾರ್ ಅವರಿಗೆ ಶ್ರದ್ಧಾಂಜಲಿ

ಉಡುಪಿ: ಪುನೀತ್ ರಾಜಕುಮಾರ್ ಅವರಿಗೆ ಶ್ರದ್ಧಾಂಜಲಿ

643
0

ಉಡುಪಿ: ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ, ಅಪ್ಪು ಅವರು ನಟನೆ ಮಾಡುವುದಷ್ಟೇ ಅಲ್ಲ, ಯುವಕರಿಗೆ ಸ್ಫೂರ್ತಿಯಾಗಿ ಮಾರ್ಗದರ್ಶನ ಮಾಡುವುದರೊಂದಿಗೆ ಸಮಾಜ ಸೇವೆಯಲ್ಲೂ ಸೈ ಎನಿಸಿಕೊಂಡ ಅಪರೂಪದ ವ್ಯಕ್ತಿತ್ವ.

ಜಾಹೀರಾತು

ಯುವರತ್ನ ಚಿತ್ರೀಕರಣದ ವೇಳೆ ಅಪ್ಪು ಅವರನ್ನು ಭೇಟಿಯಾಗಿ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಸನ್ಮಾನಿಸಿ ಚಿತ್ರಕ್ಕೆ ಶುಭಕೋರಿದ ಕ್ಷಣ ಇನ್ನೂ ಕಣ್ಣಲ್ಲಿ ಕಟ್ಟಿದಂತಿದೆ. ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಅಪ್ಪು, ರಾಯಣ್ಣ ಅಭಿಮಾನಿ ಬಳಗದ ಕಾರ್ಯವನ್ನು ಶ್ಲಾಘಿಸಿ ರಾಯಣ್ಣ ನನ್ನ ಮನದಾಳದಲ್ಲಿ ಬೇರೂರಿದ್ದಾರೆ ಎಂದಿದ್ದರು.

ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ, ಅಭಿಮಾನಿ ಬಳಗದ ಕೃಷ್ಣ ಶೆಟ್ಟಿಬೆಟ್ಟು, ಉಪಾಧ್ಯಕ್ಷರಾದ ಲಕ್ಷ್ಮಣ ಕೊಲ್ಕಾರ್, ಈರಪ್ಪ ಗೌಂಡಿ, ಪಂಪೇಶ್, ಚೋಳಮಂಡಲಮ್ ಫೈನಾನ್ಸ್ ನ ಮ್ಯಾನೇಜರ್ ಮಿಥುನ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.