Tuesday, April 28, 2026
Tuesday, April 28, 2026

ಮಧುಮೇಹಕ್ಕೆ ಯೋಗ ಚಿಕಿತ್ಸೆ

ಮಧುಮೇಹಕ್ಕೆ ಯೋಗ ಚಿಕಿತ್ಸೆ

Date:

ಮಣಿಪಾಲ, ಜೂ.17: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿಯಾಗಿ, ಕೇಂದ್ರ ಆಯುಷ್ ಸಚಿವಾಲಯ ಮತ್ತು ಸಿಸಿ ಆರ್ ವೈ ಎನ್ ನವದೆಹಲಿ, ಮುನಿಯಾಲ್ ಇನ್ಸ್ಟಿಟ್ಯೂಟ್ ಆಫ್ ಯೋಗ ಅಂಡ್ ನ್ಯಾಚುರೋಪಥಿ ಇವರ ಸಂಯುಕ್ತ ಆಶ್ರಯದಲ್ಲಿ ಮಧುಮೇಹಕ್ಕೆ ಯೋಗ ಚಿಕಿತ್ಸೆ ವಿಷಯವಾಗಿ ಒಂದು ದಿನದ ಉಚಿತ ವಿಚಾರಗೋಷ್ಠಿ ಮತ್ತು ಕಾರ‍್ಯಾಗಾರವನ್ನು ಮುನಿಯಾಲ್ ಸಮೂಹ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ತಜ್ಞ ವೈದ್ಯರುಗಳಾದ ಮಣಿಪಾಲದ ಕೆ ಎಮ್ ಸಿ ಯ ಜನರಲ್ ಮೆಡಿಸಿನ್ ವಿಭಾಗದ ಸಹಪ್ರಾಧ್ಯಾಪಕಿಯಾದ ಡಾ. ಶುಭದಾ, ಎಸ್‌ಡಿಎಮ್ ನ್ಯಾಚುರೋಪಥಿ ಮತ್ತು ಯೋಗ ವಿಜ್ಞಾನ ಕಾಲೇಜಿನ ಯೋಗ ವಿಭಾಗದ ಡೀನ್ ಡಾ. ಶಿವಪ್ರಸಾದ್ ಶೆಟ್ಟಿ, ಆಳ್ವಾಸ್ ನ್ಯಾಚುರೋಪಥಿ ಮತ್ತು ಯೋಗ ವಿಜ್ಞಾನ ಕಾಲೇಜಿನ ಪ್ರಾಂಶುಪಾಲೆಯಾದ ಡಾ. ವನಿತಾ ಶೆಟ್ಟಿ ಹಾಗೂ ಶಾರದ ಯೋಗ ಮತ್ತು ನ್ಯಾಚುರೋಪಥಿ ಕಾಲೇಜಿನ ಪ್ರಾಂಶುಪಾಲರಾದ ಡಾ. ನಂದೀಶ್ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಮಧುಮೇಹದ ಸಂಬಂಧಿತ ತಪ್ಪು ಕಲ್ಪನೆಗಳು ಮತ್ತು ಸತ್ಯಗಳು, ಯೋಗ ಚಿಕಿತ್ಸೆ, ಒತ್ತಡ ನಿರ್ವಹಣೆ ಮತ್ತು ಯೋಗ ಪ್ರರ‍್ಶನಗಳಂತಹ ಪ್ರಮುಖ ವಿಷಯಗಳನ್ನು ಪ್ರಸ್ತುತಪಡಿಸಲಾಗಿತ್ತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಷ್ಟ್ರೀಯ ಗೋಮಾತೆ ಗೌರವ ಅಭಿಯಾನ ಸರಕಾರಕ್ಕೆ ಮನವಿ ಸಲ್ಲಿಕೆ

ಬ್ರಹ್ಮಾವರ, ಏ.27: ಗೋಮಾತೆಯ ಗೌರವ ಅಭಿಯಾನ ಅಂಗವಾಗಿ ಗೋಮಾತಾ ಗೌರವ ದಿನಾಚರಣೆಯನ್ನು...

ಕಸ್ತೂರ್ಬಾ ಆಸ್ಪತ್ರೆ: ವೃತ್ತಿಪರರ ಸಪ್ತಾಹ 2026 ಆಚರಣೆ

ಮಣಿಪಾಲ, ಏ.27: ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲವು ಏಪ್ರಿಲ್ 25 ರಂದು ವೈದ್ಯಕೀಯ...

ಶ್ರೀ ಕೃಷ್ಣ ಮಠಕ್ಕೆ ಉತ್ತರಾಧಿ ಮಠದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದರ ಭೇಟಿ

ಉಡುಪಿ, ಏ.27: ಪರ್ಯಾಯ ಶ್ರೀ ಶೀರೂರು ಮಠ ಪರ್ಯಾಯ ಪೀಠಾಧೀಶರಾದ ಶ್ರೀ...

ನಾಗಬನದಲ್ಲಿ ಅಪೂರ್ವ ಕಾರ್ಯಕ್ರಮ

ಉಡುಪಿ, ಏ.26: ಸುಮಾರು ಒಂದು ಸಾವಿರ ವರ್ಷಗಳ ಹಳೆಯ ಶ್ರೀ ನಾಗಬ್ರಹ್ಮಸ್ಥಾನ...
error: Content is protected !!