Saturday, September 5, 2026
Saturday, September 5, 2026

ಜಿಲ್ಲಾ ಉಸ್ತುವಾರಿ ಸಚಿವರ ಉಡುಪಿ ಜಿಲ್ಲಾ ಪ್ರವಾಸ ಕಾರ್ಯಕ್ರಮ

ಜಿಲ್ಲಾ ಉಸ್ತುವಾರಿ ಸಚಿವರ ಉಡುಪಿ ಜಿಲ್ಲಾ ಪ್ರವಾಸ ಕಾರ್ಯಕ್ರಮ

Date:

ಉಡುಪಿ, ಜೂ.19: ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳಕರ್ ಅವರು ಜೂನ್ 19 ರಿಂದ 21 ರ ವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಜೂ. 19 ರಂದು ರಾತ್ರಿ 9.45 ಕ್ಕೆ ಉಡುಪಿಗೆ ಆಗಮಿಸುವ ಅವರು, ಸರ್ಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಜೂ. 20 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ, ಮಧ್ಯಾಹ್ನ 2 ಗಂಟೆಗೆ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಉಡುಪಿ ಮತ್ತು ಬ್ರಹ್ಮಾವರ ತಾಲೂಕು ಅರ್ಹ ಫಲಾನುಭವಿಗಳಿಗೆ 94 ಸಿ ಹಕ್ಕು ಪತ್ರ ವಿತರಣಾ ಕಾರ್ಯಕ್ರಮ, 3 ಗಂಟೆಗೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಜೂ. 21 ರಂದು ಬೆಳಗ್ಗೆ 7 ಗಂಟೆಗೆ ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ, 10 ಗಂಟೆಗೆ ಬೈಂದೂರು ತಹಶೀಲ್ದಾರರ ಕಚೇರಿ ಬಳಿ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಕಾರ್ಯಕ್ರಮ, 10.30 ಕ್ಕೆ ಬೈಂದೂರಿನ ರೋಟರಿ ಭವನದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ವಂಡ್ಸೆ ಮತ್ತು ಬೈಂದೂರು ಹೋಬಳಿಯ ಅರ್ಹ ಫಲಾನುಭವಿಗಳಿಗೆ 94 ಸಿ ಹಕ್ಕುಪತ್ರ ಹಾಗೂ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ, 11.15 ಕ್ಕೆ ಬೈಂದೂರಿನಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವರು, ಮಧ್ಯಾಹ್ನ 3 ಗಂಟೆಗೆ ಕಾಪು ತಹಶೀಲ್ದಾರರ ಕಚೇರಿ ಬಳಿ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಮಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!