Thursday, April 16, 2026
Thursday, April 16, 2026

ಬನ್ನಂಜೆ 90 ಉಡುಪಿ ನಮನ ಕಾರ್ಯಕ್ರಮ

ಬನ್ನಂಜೆ 90 ಉಡುಪಿ ನಮನ ಕಾರ್ಯಕ್ರಮ

Date:

ಉಡುಪಿ, ಜೂ.23: ವಿದ್ಯಾವಾಚಸ್ಪತಿ ಗೋವಿಂದಾಚಾರ್ಯರ ಬನ್ನಂಜೆ ಬದುಕು, ಸಾಧನೆಯ ಸ್ಮರಣೆಗಾಗಿ ಬನ್ನಂಜೆ 90 ಉಡುಪಿ ನಮನ ಕಾರ್ಯಕ್ರಮ ರಾಜ್ಯದ 24 ಕಡೆಗಳಲ್ಲಿ ನಡೆಯಲಿದೆ ಎಂದು ಸಾಂಸ್ಕೃತಿಕ ಚಿಂತಕಿ ವೀಣಾ ಬನ್ನಂಜೆ ತಿಳಿಸಿದ್ದಾರೆ. ಆ.3ರಂದು ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯುವ ಬನ್ನಂಜೆ 90ರ ನಮನ ಅಂಗವಾಗಿ ರಾಜಾಂಗಣ ಬಳಿಯ ಮಥುರಾ ಕಂಫರ್ಟ್‌ ನಲ್ಲಿ ಬುಧವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಬನ್ನಂಜೆ 90ರ ನಮನ ಸಮಿತಿ ಕಾರ್ಯಾಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಬನ್ನಂಜೆ ಗೋವಿಂದಾಚಾರ್ಯ ರಂತಹ ವ್ಯಕ್ತಿಗಳು ಬದುಕಿನಲ್ಲಿ ಮಾಡಿದ ಶ್ರೇಷ್ಠ ಸಾಧನೆ ಸತ್ತ ನಂತರವೂ ಸ್ಮರಣೀಯ ಎಂದರು.

ಸಭೆಯಲ್ಲಿ ನಡೆದಂತೆ ಬನ್ನಂಜೆಯವರ ಮೂಲಮನೆ ಕುಂಜಿಗುಡ್ಡೆಯಿಂದ ಕರಾವಳಿ ಜಂಕ್ಷನ್ ತನಕ ಮೆರವಣಿಗೆ. ಆ. 3ರಂದು ಬೆಳಗ್ಗೆ 10ಗಂಟೆಗೆ ಕಾರ್ಯಕ್ರಮ ಉದ್ಘಾಟನೆ, ಬನ್ನಂಜೆ ರಚಿತ ಹಾಡುಗಳ ಗಾಯನ. ಹೈಕೋರ್ಟ್ ನ್ಯಾಯಮೂರ್ತಿ ಶ್ರೀಶಾನಂದರಿಂದ ಬನ್ನಂಜೆ 90 ಉಡುಪಿ ನಮನ ಕಾರ್ಯಕ್ರಮ ಉದ್ಘಾಟನೆ, ಸಮಾರೋಪದಲ್ಲಿ ಗಂಗಾವತಿ ಪ್ರಾಣೇಶ್, ಲೇಖಕಿ ವೈದೇಹಿ ಮೊದಲಾದ ಗಣ್ಯರು ಉಪಸ್ಥಿತರಿರುವರು. ಬನ್ನಂಜೆ ಬದುಕಿನ ಎರಡು ಗೋಷ್ಠಿ, ಕೃತಿ ಮತ್ತು ಸ್ಮರಣಿಕೆಗಳ ಪ್ರದರ್ಶನ. ಸಮಾರೋಪದ ಬಳಿಕ ವಿದ್ಯಾಭೂಷಣರಿಂದ ಬನ್ನಂಜೆ ರಚಿತ ಕೃತಿಗಳ ಸುಮಧುರ ಗಾಯನ. 90ರ ಸ್ಮರಣೆಗಾಗಿ 90 ಗಿಡ ನೆಟ್ಟು ಗೋವಿಂದವನ ನಿರ್ಮಾಣಕ್ಕೆ ಚಾಲನೆ, ಸಭೆಯಲ್ಲಿ ಉದ್ಯಮಿ ಯು. ವಿಶ್ವನಾಥ ಶೆಣೈ, ಡಾ. ಮಾಧವಿ ಭಂಡಾರಿ, ನಾರಾಯಣ ಮಡಿ ಉಪಸ್ಥಿತರಿದ್ದರು. ಸಮಿತಿ ಸಂಚಾಲಕ ರವಿರಾಜ್ ಎಚ್. ಪಿ. ಸ್ವಾಗತಿಸಿ, ಅಸ್ಟ್ರೋ ಮೋಹನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜನಾರ್ದನ್ ಕೊಡವೂರು ನಿರೂಪಿಸಿದರು. ಪ್ರೊ. ಸದಾಶಿವ ರಾವ್ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

20,400 ಮೆಟ್ರಿಕ್ ಟನ್ ಎಲ್‌ಪಿಜಿಯೊಂದಿಗೆ ದೀನ್‌ದಯಾಳ್ ಬಂದರಿಗೆ ತಲುಪಿದ ಭಾರತೀಯ ನೌಕೆ ಜಗ್ ವಿಕ್ರಮ್

ಅಹಮದಾಬಾದ್, ಏ.16: ಭಾರತೀಯ ಧ್ವಜ ಹೊತ್ತ ಎಲ್‌ಪಿಜಿ ನೌಕೆ ಎಂವಿ ಜಗ್...

ಕರ್ನಾಟಕ ಸೇರಿದಂತೆ ಇತರೆ ರಾಜ್ಯಗಳಿಗೆ ಉಷ್ಣ ಅಲೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ನವದೆಹಲಿ, ಏ.16: ಏ. 16 ಗುರುವಾರ ಛತ್ತೀಸ್‌ಗಢ, ಪೂರ್ವ ಮಧ್ಯಪ್ರದೇಶ, ಮಹಾರಾಷ್ಟ್ರ,...

ಉಡುಪಿ ನಗರಸಭೆ: ವಿವಿಧ ಸೌಲಭ್ಯ – ಅರ್ಜಿ ಆಹ್ವಾನ

ಉಡುಪಿ, ಏ.16: ಉಡುಪಿ ನಗರಸಭೆಯ 2025-26 ನೇ ಸಾಲಿನ ಎಸ್.ಎಫ್.ಸಿ ಮುಕ್ತನಿಧಿಯಡಿ...

ಶಾಖದ ಹೊಡೆತದಿಂದ ಸಾರ್ವಜನಿಕರ ಆರೋಗ್ಯ ಕಾಪಾಡಿಕೊಳ್ಳಲು ಸಲಹೆ ಸೂಚನೆಗಳು

ಉಡುಪಿ, ಏ.16: ಪ್ರಸ್ತುತ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ...
error: Content is protected !!