Sunday, July 26, 2026
Sunday, July 26, 2026

ವಕೀಲರ ಸಂಘದಿಂದ ಉಡುಪಿ ಎಸ್.ಪಿ. ಭೇಟಿ

ವಕೀಲರ ಸಂಘದಿಂದ ಉಡುಪಿ ಎಸ್.ಪಿ. ಭೇಟಿ

Date:

ADVERTISEMENT
ADVERTISEMENT

ಉಡುಪಿ, ಜೂ.24: ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಹರಿರಾಮ್ ಶಂಕರ್ ಅವರನ್ನು ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ನೇತೃತ್ವದ ನಿಯೋಗವು ಸೋಮವಾರ ಭೇಟಿಯಾಗಿ ಅಭಿನಂದಿಸಿತು. ಜಿಲ್ಲೆಯ ಕಾನೂನು ಸುವ್ಯವಸ್ಥೆ ಮತ್ತು ನಗರದ ಸಂಚಾರ ವ್ಯವಸ್ಥೆ ಕಾಪಾಡಲು ವಿಶೇಷ ಆದ್ಯತೆ ನೀಡುವಂತೆ ಹಾಗೂ ಉಡುಪಿ ನಗರ ಪೊಲೀಸ್ ಠಾಣೆಯು ಬಹಳ ಇಕ್ಕಟ್ಟಾಗಿರುವುದರಿಂದ ಆ ಠಾಣೆಯ ಮೇಲ್ಭಾಗದಲ್ಲಿರುವ ಮಹಿಳಾ ಠಾಣೆಯನ್ನು ಬೇರೆಡೆ ಸ್ಥಳಾಂತರಿಸುವಂತೆ ವಿನಂತಿಸಲಾಯಿತು. ವಕೀಲರ ಸಂಘಕ್ಕೆ ಭೇಟಿ ನೀಡಿ “ಸಂವಾದ ಕಾರ್ಯಕ್ರಮ”ದಲ್ಲಿ ಭಾಗವಹಿಸುವಂತೆಯೂ ಆಹ್ವಾನಿಸಲಾಯಿತು. ಸಕಾರಾತ್ಮಕವಾಗಿ ಸ್ಪಂದಿಸಿದ ಎಸ್.ಪಿ.ಯವರು ಅತಿ ಶೀಘ್ರ ವಕೀಲರ ಸಂಘಕ್ಕೆ ಭೇಟಿ ನೀಡುವುದಾಗಿ ಭರವಸೆ ನೀಡಿದರು. ನಿಯೋಗದಲ್ಲಿ ವಕೀಲರ ಸಂಘದ ಪದಾಧಿಕಾರಿಗಳಾದ ರಾಜೇಶ್ ಎ.ಆರ್., ಬೈಲೂರು ರವೀಂದ್ರ ದೇವಾಡಿಗ, ಸಂತೋಷ್ ಮೂಡುಬೆಳ್ಳೆ, ಜಯಕೃಷ್ಣ ಆಳ್ವ ಮತ್ತು ಆರೂರು ಸುಕೇಶ್ ಶೆಟ್ಟಿ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!