ಗಣಿತನಗರ, ಜೂ.25: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ‘ಮೌಲ್ಯಸುಧಾ’ ಜರುಗುತ್ತಾ ಬರುತ್ತಿದೆ. ಜೂನ್ ತಿಂಗಳ ಮೌಲ್ಯಸುಧಾ ಮಾಲಿಕೆ-37 ತಾರೀಕು 28, ಶನಿವಾರದಂದು ಸಂಜೆ 6 ಗಂಟೆಗೆ ನಡೆಯಲಿದ್ದು, ಸಂಪನ್ಮೂಲ ವ್ಯಕ್ತಿಯಾಗಿ ರಾಮಕೃಷ್ಣ ವಿವೇಕಾನಂದ ಆಶ್ರಮ, ರಾಮಕೃಷ್ಣ ನಗರ, ತುಮಕೂರಿನ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮಿಜಿಯವರು ಆಗಮಿಸಲಿದ್ದು, ‘ಸ್ವನಿಯಂತ್ರಣ: ಬಂಧನವೋ? ಸ್ವಾತಂತ್ರ್ಯ್ಯವೋ?’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಆಸಕ್ತರು ಭಾಗವಹಿಸಬಹುದೆಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಜ್ಞಾನಸುಧಾ: ಸ್ವಾಮಿ ವೀರೇಶಾನಂದ ಸರಸ್ವತಿಯವರಿಂದ ‘ಮೌಲ್ಯಸುಧಾ’
ಜ್ಞಾನಸುಧಾ: ಸ್ವಾಮಿ ವೀರೇಶಾನಂದ ಸರಸ್ವತಿಯವರಿಂದ ‘ಮೌಲ್ಯಸುಧಾ’
Date:




By
ForthFocus™