Sunday, September 6, 2026
Sunday, September 6, 2026

ರಂಗವಲ್ಲಿಯ ಮೂಲಕ ಕಾರಂತರನ್ನು ಪರಿಚಯಿಸುವ ನೂತನ ಕಾರ್ಯಕ್ರಮ

ರಂಗವಲ್ಲಿಯ ಮೂಲಕ ಕಾರಂತರನ್ನು ಪರಿಚಯಿಸುವ ನೂತನ ಕಾರ್ಯಕ್ರಮ

Date:

ಉಡುಪಿ, ಜೂ.30: ಡಾ. ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ನೇತಾಜಿ ಸುಭಾಷ್ ಚಂದ್ರ ಸರಕಾರಿ ಪ್ರೌಢ ಶಾಲೆ ಗಾಂಧಿನಗರ ಮರವಂತೆ ಇವರ ಸಹಯೋಗದಲ್ಲಿ ಮಕ್ಕಳಿಗಾಗಿ ಕಾರಂತರು-2 ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಡಾ.ಕಾರಂತರ ಪರಿಚಯ, ರಂಗವಲ್ಲಿಯ ಮೂಲಕ ಕಾರಂತರು ಕಾರ್ಯಕ್ರಮದಲ್ಲಿ ಖ್ಯಾತ ರಂಗವಲ್ಲಿ ಕಲಾವಿದೆ ಡಾ. ಭಾರತಿ ಮರವಂತೆ ಅವರಿಂದ ಶಾಲಾ ವಿದ್ಯಾರ್ಥಿಗಳಿಗೆ ಕಾರಂತರ ಪುಸ್ತಕಗಳಲ್ಲಿರುವ ಚಿತ್ರಗಳನ್ನು ರಂಗವಲ್ಲಿಯ ಮೂಲಕ ಚಿತ್ರಿಸುವ ನೂತನ ಕಾರ್ಯಕ್ರಮವು ಶಾಲೆಯ ವಸಂತಿ ಕುಮಾರಿ ಕಲಾಂಗಣದಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಲಾ ಸಂಸ್ಥಾಪಕ ಸಮಿತಿಯ ಅಧ್ಯಕ್ಷ ಎಸ್ ಜನಾರ್ದನ ಮರವಂತೆ, ಡಾ. ಶಿವರಾಮ ಕಾರಂತರು ಸಾಹಿತ್ಯ ಮೂಲಕ ಸಮಾಜದಲ್ಲಿ ಅನೇಕ ಬದಲಾವಣೆಯನ್ನು ತಂದವರು, ಇಂದಿನ ಯುವ ಪೀಳಿಗೆಯು ಅವರ ಕುರಿತು ಇನ್ನಷ್ಟು ವಿಚಾರಗಳನ್ನು ಅರಿಯುವುದು ಅತ್ಯಗತ್ಯ ಎಂದರು. ಖ್ಯಾತ ರಂಗವಲ್ಲಿ ಕಲಾವಿದೆ ಉಪನ್ಯಾಸ ನೀಡಿ ಮಾತನಾಡಿ, ಮಕ್ಕಳ ಕುರಿತು ವಿಶೇಷ ಕಾಳಜಿ ಹೊಂದಿದ್ದ ಕಾರಂತರು ಮಕ್ಕಳಿಗಾಗಿ ಅನೇಕ ಪುಸ್ತಕಗಳನ್ನು ಸರಳ ಬರವಣಿಗೆ ಮೂಲಕ ರಚಿಸಿದ್ದು, ವಿದ್ಯಾರ್ಥಿಗಳು ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಎಕ್ಕಾರು, ಡಾ. ಶಿವರಾಮ ಕಾರಂತರು ಪ್ರಯೋಗಶೀಲತೆಯ ಮನೋಭಾವದಿಂದಾಗಿ ಸಾಹಿತ್ಯ ಮಾತ್ರವಲ್ಲದೇ ವಿವಿಧ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡವರು, ಕಾರಂತರನ್ನು ಕೇಂದ್ರವಾಗಿಟ್ಟುಕೊಂಡು ಪಠ್ಯಪೂರಕ ಚಟುವಟಿಗಳ ಮೂಲಕ ವಿದ್ಯಾರ್ಥಿಗಳ ವ್ಯಕ್ತಿ ವಿಕಸನಕ್ಕೆ ಸಹಕಾರಿಯಾಗುವಂತಹ ಕಾರ್ಯಕ್ರಮದ ಅಯೋಜನೆಗೊಳಿಸುವುದು ಟ್ರಸ್ಟಿನ ಮುಖ್ಯ ಉದ್ದೇಶವಾಗಿದೆ ಎಂದರು. ಡಾ. ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಡಾ. ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರಂಗೋಲಿ ಸ್ಪರ್ಧೆಯ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಸುಜಾತಾ, ಶಾಲಾ ರಜತೋತ್ಸವ ಸಮಿತಿಯ ಅಧ್ಯಕ್ಷ ದಯಾನಂದ ಬಳೆಗಾರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಡಾ. ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿ ಪೂರ್ಣಿಮಾ ಸ್ವಾಗತಿಸಿ, ಅಧ್ಯಾಪಕ ರಮೇಶ್ ನಿರೂಪಿಸಿ, ಹಿತೇಶ್ ಶೆಟ್ಟಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!