Saturday, September 5, 2026
Saturday, September 5, 2026

ವಿವೇಕ ಆಂಗ್ಲ ಮಾಧ್ಯಮ ಪ್ರೌಢಶಾಲಾ ಸಂಸತ್ತು ಉದ್ಘಾಟನೆ

ವಿವೇಕ ಆಂಗ್ಲ ಮಾಧ್ಯಮ ಪ್ರೌಢಶಾಲಾ ಸಂಸತ್ತು ಉದ್ಘಾಟನೆ

Date:

ಕೋಟ, ಜು.1: ಯುವ ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವ ಸಂಸದೀಯ ವ್ಯವಸ್ಥೆಯ ಅರಿವು ಮೂಡಿಸುವಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ಮಾದರಿ ಸಂಸದೀಯ ಕಾರ್ಯ ನಡವಳಿಕೆಯನ್ನು ಪ್ರಾಯೇೂಗಿಕವಾಗಿ ನಡೆಸುವುದರ ಮೂಲಕ ವಿದ್ಯಾರ್ಥಿಗಳಲ್ಲಿ ರಾಜಕೀಯ ಪ್ರಜ್ಞೆ ಮೂಡಿಸುವುದು ಇಂದಿನ ಅಗತ್ಯತೆಯೂ ಹೌದು. ಪ್ರಜಾಪ್ರಭುತ್ವದಲ್ಲಿ ನಾಯಕತ್ವ ಗುಣ ಬೆಳೆಸುವುದು ಶಿಕ್ಷಣದ ಮೂಲ ಉದ್ದೇಶ. ನಾಯಕತ್ವದ ಪ್ರಮುಖ ಗುಣಗಳಾದ ನಮ್ರತೆ, ಸ್ವಷ್ಟತೆ, ಧೈರ್ಯ, ನಿರ್ಧಾರ ಮುಂತಾದ ಸಾಮರ್ಥ್ಯವನ್ನು ವಿದ್ಯಾರ್ಥಿ ದಿಸೆಯಲ್ಲಿಯೇ ಮೈಗೂಡಿಸಿಕೊಳ್ಳಬೇಕು ಎಂದು ರಾಜಕೀಯ ವಿಶ್ಲೇಷಕ ಎಂ.ಜಿ.ಎಂ ಕಾಲೇಜಿನ ನಿವೃತ್ತ ರಾಜ್ಯಶಾಸ್ತ್ರ ಮುಖ್ಯಸ್ಥ ಪ್ರೊ. ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಹೇಳಿದರು. ಕೇೂಟ ವಿವೇಕ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿ ಸಂಸತ್ತು ಉದ್ಘಾಟಿಸಿ ಅವರು ಮಾತನಾಡಿದರು. ಸಭಾಧ್ಯಕ್ಷತೆಯನ್ನು ಪ್ರೌಢಶಾಲಾ ಮುಖ್ಯಸ್ಥೆ ಪ್ರೀತಿ ರೇಖಾ ವಹಿಸಿ ಪ್ರತಿಜ್ಞಾ ವಿಧಿ ಬೇೂಧಿಸಿದರು. ಶಾಲಾ ಸಂಸತ್ತು ಸದನದ ಸಭಾಪತಿ ಸಮೃದ್ಧಿ, ಉಪ ಸಭಾಪತಿ ಪ್ರಗತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿ ನಾಯಕ ಅಭಿಷೇಕ್ ಸ್ವಾಗತಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!