Sunday, September 6, 2026
Sunday, September 6, 2026

ಮಾದಕ ದ್ರವ್ಯ ವ್ಯಸನ ಯುವಜನತೆಯನ್ನು ಕಾಡುತ್ತಿರುವ ದೊಡ್ಡ ಪಿಡುಗು: ಶಂಭುಲಿಂಗಯ್ಯ

ಮಾದಕ ದ್ರವ್ಯ ವ್ಯಸನ ಯುವಜನತೆಯನ್ನು ಕಾಡುತ್ತಿರುವ ದೊಡ್ಡ ಪಿಡುಗು: ಶಂಭುಲಿಂಗಯ್ಯ

Date:

ಶಂಕರನಾರಾಯಣ, ಜು.1: ಮಾದಕ ದ್ರವ್ಯ ಸೇವನೆ ವ್ಯಕ್ತಿಯ ಆರೋಗ್ಯ ಮತ್ತು ಜೀವನದ ಮೇಲೆ ದುಷ್ಪರಿಣಾಮ ಬೀರುತ್ತದೆ. ಅಂತಹ ಕೃತ್ಯಗಳಲ್ಲಿ ತೊಡಗಿಸಿಕೊಂಡವರಿಗೆ ಕಾನೂನಿನ ಅನ್ವಯ ವಿವಿಧ ಶಿಕ್ಷೆಗಳನ್ನು ನೀಡಲಾಗುತ್ತದೆ. ಮಾದಕ ದ್ರವ್ಯ ವ್ಯಸನವನ್ನು ತಡೆಗಟ್ಟುವಲ್ಲಿ ವಿದ್ಯಾರ್ಥಿಗಳ ಸಾಮಾಜಿಕ ಜವಾಬ್ದಾರಿಯನ್ನು ಬಹಳ ದೊಡ್ಡದು ಎಂದು ಶಂಕರನಾರಾಯಣ ಪೋಲಿಸ್ ಠಾಣೆಯ ಠಾಣಾಧಿಕಾರಿಗಳಾದ ಶಂಭುಲಿಂಗಯ್ಯ ಎಮ್.ಇ. ಹೇಳಿದರು. ಅವರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಶಂಕರನಾರಾಯಣದಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶ, ಮಾದಕ ದ್ರವ್ಯ ನಿರ್ಮೂಲನಾ ಸಮಿತಿ ಮತ್ತು ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ವಿಭಾಗದ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಿದ್ದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ವೆಂಕಟರಾಮ್ ಭಟ್ ಮಾತನಾಡಿ, ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಐಕ್ಯೂಎಸಿ ಸಂಚಾಲಕ ಡಾ.ವಸಂತ್ ಜಿ ಉಪಸ್ಥಿತರಿದ್ದರು, ಸ್ನಾತಕೋತ್ತರ ವಿಭಾಗ ಸಂಯೋಜಕಿ ಪ್ರಜ್ಞಾ ಕಾರ್ಯಕ್ರಮ ನಡೆಸಿಕೊಟ್ಟರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!