ಉಡುಪಿ, ಜು.3: ಸಾರ್ವತ್ರಿಕವಾಗಿ ಕಣ್ಣಿನ ಆರೋಗ್ಯ ಉತ್ತಮಗೊಳಿಸುವ ನಿಟ್ಟಿನಲ್ಲಿ ನಿರಂತರವಾಗಿ ಸಮಗ್ರ ಕಣ್ಣಿನ ಆರೈಕೆಗಾಗಿ ಸರಕಾರದ ಮಹಾತ್ವಾಕಾಂಕ್ಷೆ ಯೋಜನೆಯಾದ ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಥಾಪಿಸಲಾದ ಶಾಶ್ವತ ಆಶಾಕಿರಣ ದೃಷ್ಠಿಕೇಂದ್ರವನ್ನು ಜಿಲ್ಲಾ ಸರ್ಜನ್ ಡಾ. ಅಶೋಕ್ ಹೆಚ್ ಗುರುವಾರ ಉದ್ಘಾಟಿಸಿದರು. ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಜ್ಯೋತ್ಸ್ನಾ ಬಿ.ಕೆ, ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ.ಲತಾ ನಾಯಕ್, ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಶಾಶ್ವತ ಆಶಾಕಿರಣ ದೃಷ್ಠಿಕೇಂದ್ರಗಳಲ್ಲಿ ಕಣ್ಣಿನ ಸಮಸ್ಯೆ ಇರುವ ಸಾರ್ವಜನಿಕರಿಗೆ ಉಚಿತವಾಗಿ ಚಿಕಿತ್ಸೆಯನ್ನು ನೀಡಲಾಗುವುದು. ದೃಷ್ಠಿದೋಷವಿರುವ ಅರ್ಹ ಫಲಾನುಭವಿಗಳಿಗೆ ಈ ದೃಷ್ಠಿಕೇಂದ್ರಗಳಲ್ಲಿಯೇ ಚಿಕಿತ್ಸೆ, ಕನ್ನಡಕ ವಿತರಣೆ ಹಾಗೂ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗೆ ಗುರುತಿಸಿ ಶಸ್ತ್ರ ಚಿಕಿತ್ಸೆ ನಡೆಸಲಾಗುವುದು.
ಉಡುಪಿ: ಆಶಾಕಿರಣ ದೃಷ್ಠಿಕೇಂದ್ರ ಉದ್ಘಾಟನೆ
ಉಡುಪಿ: ಆಶಾಕಿರಣ ದೃಷ್ಠಿಕೇಂದ್ರ ಉದ್ಘಾಟನೆ
Date:




By
ForthFocus™