ಕೋಟ, ಜು.:6 ಸರಕಾರಿ ಸಂಯುಕ್ತ ಪ್ರೌಢಶಾಲೆ ಪ್ರಾಥಮಿಕ ವಿಭಾಗ ಮತ್ತು ಗೀತಾನಂದ ಫೌಂಡೇಶನ್ ಮಣೂರು ಪಡುಕೆರೆ ಸಹಯೋಗದಲ್ಲಿ ಸಂಭ್ರಮದ ಸಾಗುವಳಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ ಸಿ ಕುಂದರ್ ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ, ಕೃಷಿ ನಮ್ಮ ಸಂಸ್ಕೃತಿಯ ಒಂದು ಅವಿಭಾಜ್ಯ ಅಂಗ. ಅದರ ಮಧುರಾನುಭವ ಪ್ರತಿಯೊಬ್ಬರೂ ಅನುಭವಿಸಬೇಕು ಹಾಗಾಗಿ ಇಂತಹ ಕಾರ್ಯಕ್ರಮಗಳು ಮಕ್ಕಳಿಗೆ ಬಹಳ ವಿಚಾರಗಳನ್ನು ತಿಳಿಸುತ್ತದೆ ಎಂದರು. ಗೀತಾನಂದ ಸಂಸ್ಥೆಯ ಮುಖ್ಯಸ್ಥರಾದ ದಿವ್ಯಲಕ್ಷ್ಮಿ ಪ್ರಶಾಂತ್ ಕುಂದರ್, ಶಾಲಾ ಮುಖ್ಯ ಶಿಕ್ಷಕರಾದ ಮಂಜುನಾಥ ಹೊಳ್ಳ, ಶಾಲಾ ಶಿಕ್ಷಕರು, ಜನತಾ ಸಂಸ್ಥೆಯ ಶ್ರೀನಿವಾಸ ಕುಂದರ್, ರವಿಕಿರಣ, ಪಾಂಡು ಪೂಜಾರಿ, ದೀಕ್ಷಿತಾ, ಅರುಣ್ ಕುಮಾರ್ ಉಪಸ್ಥಿತರಿದ್ದರು. ಮಕ್ಕಳಿಗೆ ಹಿಂದಿನ ಸಾಂಪ್ರದಾಯಿಕ ತಿಂಡಿ ನೆನಪಿಸುವ ನಿಟ್ಟಿನಲ್ಲಿ ಅವಡೆ ಕಿಚಡಿಯನ್ನು ಸಾಗುವನಿ ಎಲೆಯಲ್ಲಿ ಬಡಿಸಲಾಯಿತು.
ಸಂಭ್ರಮದ ಸಾಗುವಳಿ
ಸಂಭ್ರಮದ ಸಾಗುವಳಿ
Date:




By
ForthFocus™