ಹಿರಿಯಡಕ, ಜು.6: ನೀಡ್ ಬೇಸ್ ಇಂಡಿಯಾ ಬೆಂಗಳೂರು ವತಿಯಿಂದ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 23 ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮ ಹಿರಿಯಡಕ ಅಂಬೇಡ್ಕರ್ ಭವನದಲ್ಲಿ ನಡೆಯಿತು.
ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಸಾಂಕೇತಿಕವಾಗಿ ನೋಟ್ ಪುಸ್ತಕ ವಿತರಿಸಿ, ದಾನಿಗಳಿಗೆ ಅಭಿನಂದನೆ ಸಲ್ಲಿಸಿದರು.
ಕೊಡಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂದೀಪ್ ಮಡಿವಾಳ, ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪುರಂದರ ಕೋಟ್ಯಾನ್, ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚೇತನಾ ಶೆಟ್ಟಿ, ಉಪಾಧ್ಯಕ್ಷರಾದ ದೇವು ಪೂಜಾರಿ, ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಹರೀಶ್ ಸಾಲಿಯಾನ್, ಬೈರಂಪಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಿಯಾನಂದ ಹೆಗಡೆ, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಬಿ.ಎಲ್ ವಿಶ್ವಾಸ್ ಭಟ್, ವಿದ್ಯಾಂಗ ಉಪನಿರ್ದೇಶಕರಾದ ಲೋಕೇಶ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಯಲ್ಲಮ್ಮ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು




By
ForthFocus™