Sunday, July 26, 2026
Sunday, July 26, 2026

ಸಂತೆಕಟ್ಟೆ: ಒಣ ಮೀನು ಮಾರುಕಟ್ಟೆ ಉದ್ಘಾಟನೆ

ಸಂತೆಕಟ್ಟೆ: ಒಣ ಮೀನು ಮಾರುಕಟ್ಟೆ ಉದ್ಘಾಟನೆ

Date:

ಸಂತೆಕಟ್ಟೆ, ಜು.7: ಉಡುಪಿ ನಗರಸಭೆಯ ಅನುದಾನದಲ್ಲಿ ನಿರ್ಮಾಣಗೊಂಡ ಗೋಪಾಲಪುರ ವಾರ್ಡಿನ ಸಂತೆಕಟ್ಟೆ ಒಣ ಮೀನು ಮಾರುಕಟ್ಟೆಯನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಸಂತೆಕಟ್ಟೆಯ ಒಣ ಮೀನು ಮಾರಾಟಗಾರ ಮಹಿಳೆಯರ ಬಹುವರ್ಷಗಳ ಬೇಡಿಕೆಯಂತೆ ಉಡುಪಿ ನಗರಸಭೆಯ ಮೂಲಕ ರೂ.10 ಲಕ್ಷ ವೆಚ್ಚದಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಿಸಲಾಗಿದ್ದು, ವಿದ್ಯುತ್ ದೀಪ ಹಾಗೂ ಫ್ಯಾನ್ ಅಳವಡಿಕೆಗೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಉಡುಪಿ ನಗರಸಭಾ ವ್ಯಾಪ್ತಿಯ ಎಲ್ಲಾ ಮೀನು ಮಾರುಕಟ್ಟೆಗಳ ಅಭಿವೃದ್ಧಿಗೆ ವಿಶೇಷ ಮುತುವರ್ಜಿ ವಹಿಸುವುದಾಗಿ ಹೇಳಿದರು.

ಉಡುಪಿ ನಗರಸಭೆ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ನಗರಸಭಾ ಸದಸ್ಯರಾದ ಮಂಜುಳಾ ನಾಯಕ್, ಬಾಲಕೃಷ್ಣ ಶೆಟ್ಟಿ, ಜಯಂತಿ ಪೂಜಾರಿ, ಹಸಿ ಮೀನು ಮಾರಾಟಗಾರರ ಸಂಘದ ಅಧ್ಯಕ್ಷರಾದ ಬೇಬಿ ಸಾಲ್ಯಾನ್, ಕಲ್ಯಾಣಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಾಗರಾಜ ಕುಂದರ್, ಸಹಕಾರಿ ಸಂಘದ ನಿರ್ದೇಶಕರಾದ ಸುರೇಶ್ ಕುಂದರ್, ನಾರಾಯಣ, ಪ್ರಶಾಂತ್ ಕಾಂಚನ್ ಬೆಂಗ್ರೆ, ಉಮೇಶ್ ಶೆಟ್ಟಿ, ಸತೀಶ್ ನಾಯ್ಕ್, ಚಿನ್ಮಯ ಮೂರ್ತಿ, ಪ್ರಸಾದ್ ರಾವ್, ಅಜಿತ್ ಕೊಡವೂರು, ಕೃಷ್ಣ ಶೆಟ್ಟಿ, ದಿನೇಶ್ ಪೈ, ರುಡಾಲ್ಫ್ ಹಾಗೂ ಒಣ ಮೀನು ಮಾರಾಟಗಾರ ಮಹಿಳೆಯರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!