ಮಣೂರು, ಜು.11: ಗೀತಾನಂದ ಫೌಂಡೇಶನ್ ಮಣೂರು ಪಡುಕರೆ ಇದರ ಪ್ರವರ್ತಕರಾದ ಆನಂದ ಸಿ ಕುಂದರ್ ಅವರ ಮಾರ್ಗದರ್ಶನದಂತೆ ಪ್ರಸಾದ್ ನೇತ್ರಾಲಯ ಇವರ ಸಹಯೋಗದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಣೂರು ಪಡುಕರೆಯಲ್ಲಿ ಉಚಿತ ನೇತ್ರ ತಪಾಸಣೆ ಶಿಬಿರ ನೆಡಸಲಾಯಿತು. ಸುಮಾರು 680 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಶಿಬಿರದ ಸದುಪಯೋಗ ಪಡೆದುಕೊಂಡರು. ವೈದ್ಯರಾದ ವಿಷ್ಣು, ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಸಾದ್ ರಾಜ್ ಹಾಗೂ ನೇತ್ರಜ್ಯೋತಿ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಮಂಜುನಾಥ ಹೊಳ್ಳ, ವಾಹಿನಿ ಯುವಕ ಮಂಡಲದ ರಮೇಶ್ ಕುಂದರ್, ಗೀತಾನಂದ ಫೌಂಡೇಶನ್ ರವಿಕಿರಣ್ ಮತ್ತು ದೀಕ್ಷಿತಾ ಉಪಸ್ಥಿತರಿದ್ದರು.
ಪಡುಕರೆ: ಉಚಿತ ನೇತ್ರ ತಪಾಸಣೆ ಶಿಬಿರ
ಪಡುಕರೆ: ಉಚಿತ ನೇತ್ರ ತಪಾಸಣೆ ಶಿಬಿರ
Date:




By
ForthFocus™