Sunday, September 6, 2026
Sunday, September 6, 2026

ಕ್ರಿಯೇಟಿವ್: ಎನ್.ಸಿ.ಸಿ ನೌಕಾ ಘಟಕ ಉದ್ಘಾಟನೆ

ಕ್ರಿಯೇಟಿವ್: ಎನ್.ಸಿ.ಸಿ ನೌಕಾ ಘಟಕ ಉದ್ಘಾಟನೆ

Date:

ಕಾರ್ಕಳ, ಜು.12: ಕಾರ್ಕಳ ಕ್ರಿಯೇಟಿವ್ ಪಿ.ಯು ಕಾಲೇಜಿನಲ್ಲಿ 6/8 ಕರ್ನಾಟಕ ಎನ್‌.ಸಿ.ಸಿ ಉಪನೌಕಾ ಘಟಕವನ್ನು ಉದ್ಘಾಟಿಸಲಾಯಿತು. ಉದ್ಘಾಟಕರಾಗಿ ಆಗಮಿಸಿದ 6 ಕರ್ನಾಟಕ ಎನ್‌.ಸಿ.ಸಿ ನೌಕಾ ಘಟಕ ಉಡುಪಿಯ ಕಮಾಂಡಿಂಗ್ ಆಫೀಸರ್ ಕಮಾಂಡರ್ ಅಶ್ವಿನ್ ಎಂ. ರಾವ್ ಮಾತನಾಡಿ ಎನ್.ಸಿ.ಸಿ ಯ ಶ್ರೇಷ್ಠತೆ, ಅದರಲ್ಲಿರುವ ಅವಕಾಶಗಳು, ಭಾರತೀಯ ರಕ್ಷಣಾ ಪಡೆಯೊಂದಿಗಿನ ನಂಟು, ಯುವಜನತೆಯ ಪಾತ್ರ ಮತ್ತು ದೇಶದ ಭವಿಷ್ಯ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ಪ್ರೇರಣಾದಾಯಕ ಮಾತುಗಳನ್ನು ಹೇಳಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಸಹ ಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್ ರವರು ಎನ್‌.ಸಿ.ಸಿ ಯ ಶಿಸ್ತು, ಸಮಯ ಪಾಲನೆ, ನಾಯಕತ್ವ ಹಾಗೂ ದೇಶಪ್ರೇಮದ ಕುರಿತು ಉಲ್ಲೇಖಿಸಿ, ಯುವಜನತೆ ರಾಷ್ಟ್ರದ ಭವಿಷ್ಯ, ಅವರು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿದರೆ ದೇಶ ಪ್ರಗತಿಯ ಮಾರ್ಗದಲ್ಲಿ ಸಾಗುತ್ತದೆ ಎಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಹಿತನುಡಿಗಳನ್ನಾಡಿದರು. ಲೆಫ್ಟಿನೆಂಟ್ ಕಮಾಂಡರ್ ಎಂ.ಎ ಮುಲ್ತಾನಿ, ಪಿ.ಐ ಸ್ಟಾಫ್ ವರ್ಗದವರು, ಕಾಲೇಜು ಎನ್.ಸಿ.ಸಿ ನೌಕಾ ಘಟಕದ ಸಿ.ಟಿ.ಒ ಆಗಿರುವ ಆಂಗ್ಲ ಭಾಷಾ ಉಪನ್ಯಾಸಕ ಮಹೇಶ್ ಆರ್. ಶೆಣೈ ಕೆ. ಹಾಗೂ ಬೋಧಕ- ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಆಂಗ್ಲ ಭಾಷಾ ಉಪನ್ಯಾಸಕಿ ಸುದೀಕ್ಷಾ ಎಸ್. ಪೈ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!