Saturday, September 5, 2026
Saturday, September 5, 2026

ಮೃತ ಮೀನುಗಾರರ ಕುಟುಂಬಕ್ಕೆ ಮೀನುಗಾರಿಕೆ ಸಚಿವರಿಂದ ಪರಿಹಾರಧನ ವಿತರಣೆ

ಮೃತ ಮೀನುಗಾರರ ಕುಟುಂಬಕ್ಕೆ ಮೀನುಗಾರಿಕೆ ಸಚಿವರಿಂದ ಪರಿಹಾರಧನ ವಿತರಣೆ

Date:

ಉಡುಪಿ, ಜು.15: ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಡಿಸ್ಕೋ ನಾಡದೋಣಿಗೆ ಜುಲೈ 11 ರ ಶುಕ್ರವಾರ ಸೈಂಟ್ ಮೇರೀಸ್ ದ್ವೀಪದಿಂದ ಸುಮಾರು 1 ಕಿ.ಮೀ.ದೂರದಲ್ಲಿ ಬೃಹತ್ ತೆರೆಯೊಂದು ದೋಣಿಗೆ ಬಡಿದ ಪರಿಣಾಮ ದೋಣಿ ಮಗುಚಿ ಬಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟ ಉಡುಪಿ ಪಿತ್ರೋಡಿಯ ಮೃತ ನೀಲಾಧರ ಜಿ ತಿಂಗಳಾಯ ರವರ ಮನೆಗೆ ಮೀನುಗಾರಿಕಾ ಸಚಿವ ಮಂಕಾಳ ಎಸ್ ವೈದ್ಯ ರವರು ಭೇಟಿ ನೀಡಿ, ಸಾಂತ್ವನ ಹೇಳಿ, ಪರಿಹಾರದ ಚೆಕ್ ವಿತರಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೀನು ಹಿಡಿಯುವ ಸಂದರ್ಭದಲ್ಲಿ ಅಕಸ್ಮಾತ್ ಆಗಿ ಕಾಲು ಜಾರಿ ಸಮುದ್ರದಲ್ಲಿ ಬಿದ್ದು, ಅಸ್ವಸ್ಥರಾಗಿದ್ದ ನೀಲಾಧರ ಜಿ ತಿಂಗಳಾಯ ಅವರನ್ನು ತತ್‌ಕ್ಷಣ ಆಸ್ಪತ್ರೆಗೆ ದಾಖಲಿಸಿದ್ದರೂ ಸಹ ಉಳಿಸಿಕೊಳ್ಳಲಾಗಲಿಲ್ಲ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಮೃತ ಕುಟುಂಬದ ಮನೆಗೆ ಭೇಟಿ ನೀಡಿ ಅಗತ್ಯ ಸಹಕಾರ ನೀಡಿದ್ದಾರೆ.

ಭಟ್ಕಳ, ಮುರ್ಡೇಶ್ವರ ಸೇರಿದಂತೆ ಉಡುಪಿಯಲ್ಲಿಯೂ ಸಹ ಇಂತಹ ಘಟನೆಗಳು ಮತ್ತೆ ಮತ್ತೆ ಸಂಭವಿಸುತ್ತಿರುವುದು ಅತೀವ ನೋವು ತಂದಿದೆ ಎಂದ ಅವರು, ಮೃತ ಮೀನುಗಾರರ ಕುಟುಂಬಕ್ಕೆ ಸರಕಾರದ ವತಿಯಿಂದ ಎಲ್ಲಾ ರೀತಿಯ ಸಹಾಯ ನೀಡಲಾಗುವುದು ಎಂದರು. 6 ಲಕ್ಷ ರೂ. ಇದ್ದ ಪರಿಹಾರದ ಹಣವನ್ನು ವಿಶ್ವ ಮೀನುಗಾರಿಕೆ ದಿನದಂದು 10 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಇಂದು ಪರಿಹಾರದ ಹಣವನ್ನು ಕುಟುಂಬದವರಿಗೆ ವಿತರಿಸಿದ್ದೇವೆ ಹಾಗೂ ಪ್ರಪ್ರಥಮಬಾರಿಗೆ ದೋಣಿ, ಇಂಜಿನ್, ಬಲೆಯ ಖರೀದಿಗೆ ಸಹ 5 ಲಕ್ಷ ರೂ. ನೀಡಲಾಗಿದೆ. ಕರಾವಳಿ ಭಾಗದಲ್ಲಿ ಇಂತಹ ದುರಂತ ಮತ್ತೆ ಮರುಕಳಿಸದಂತೆ ಮೀನುಗಾರರು ಎಚ್ಚರಿಕೆಯಿಂದ ಇರಬೇಕು. ಕಾಲಕಾಲಕ್ಕೆ ಹವಾಮಾನ ಇಲಾಖೆಯಿಂದ ನೀಡಲಾಗುವ ಮುನ್ಸೂಚನೆಗಳನ್ನು ಪಾಲಿಸಬೇಕು ಎಂದ ಅವರು, ಸಮುದ್ರ ಪ್ರಕ್ಷಬ್ಧವಾಗಿರುವುದರಿಂದ ಕರಾವಳಿ ಭಾಗದ ಮೀನುಗಾರರು ಮೀನು ಹಿಡಿಯಲು ಸಮುದ್ರಕ್ಕೆ ಇಳಿಯದಂತೆ ಮನವಿ ಮಾಡಿದರು.

ಶಾಸಕರಾದ ಯಶ್ ಪಾಲ್ ಎಸ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗ್ಯಾರಂಟಿ ಯೋಜನ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!