Saturday, February 28, 2026
Saturday, February 28, 2026

ಕುಂತಳನಗರ: ಬೃಹತ್ ವೈದ್ಯಕೀಯ ಮತ್ತು ರಕ್ತದಾನ ಶಿಬಿರ

ಕುಂತಳನಗರ: ಬೃಹತ್ ವೈದ್ಯಕೀಯ ಮತ್ತು ರಕ್ತದಾನ ಶಿಬಿರ

Date:

ಕಟಪಾಡಿ, ಜು.26: ರೋಟರಿ ಕ್ಲಬ್ ಮಣಿಪುರ, ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ, ರೆಡ್ ಕ್ರಾಸ್‌ ಕುಂದಾಪುರ ಬ್ಲಡ್ ಬ್ಯಾಂಕ್ ಮಿಷನ್ ಆಸ್ಪತ್ರ (ಲೋಂಬಾರ್ಡ್ ಮೆಮೋರಿಯಲ್) ಮತ್ತು ಕುಂತಳನಗರ ಸಂತ ಅಂತೋನಿ ಚರ್ಚ್ ಇದರ ಸಂಯುಕ್ತ ಆಶ್ರಯದಲ್ಲಿ ಚರ್ಚಿನ ಸಭಾಂಗಣದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಚರ್ಚಿನ ಧರ್ಮಗುರು ಸ್ಟ್ಯಾನ್ಲಿ ಲೋಬೋ, ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ. ಉತ್ತಮವಾದ ಆಹಾರ ಮತ್ತು ಜೀವನ ಶೈಲಿಯಿಂದ ರೋಗ ಬರುದನ್ನು ದೂರ ಮಾಡಬಹುದು. ಈ ನಿಟ್ಟಿನಲ್ಲಿ ಈ ರೀತಿಯ ಶಿಬಿರಗಳಿಂದ ನಮ್ಮ ಆರೋಗ್ಯ ತಪಾಸಣೆ ಮಾಡಲು ಅನುಕೂಲವಾಗುತ್ತದೆ ಎಂದರು.

ಮುಖ್ಯ ಅತಿಥಿಗಳಾಗಿ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಅಧ್ಯಕ್ಷ ಜಯಕರ ಶೆಟ್ಟಿ, ಚರ್ಚಿನ ಉಪಾಧ್ಯಕ್ಷ ಸ್ಕ್ಯಾನಿ ಡಿಸೋಜಾ, ರೋಟರಿ ಕ್ಲಬ್ ಮಣಿಪುರ ಅಧ್ಯಕ್ಷ ರಾಜೇಶ್ ನಾಯ್ಕ್, ಕಾರ್ಯದರ್ಶಿ ಎ.ಜಿ ಡಿಸೋಜ, ವೈದ್ಯರುಗಳಾದ ಡಾ ಅರ್ಜುನ್ ಬಲ್ಲಾಳ, ಡಾ.ಪವಿತ್ರಾ, ಡಾ. ವೈಭವ್ ಜಯಂಟ್ಸ್ ಅಧ್ಯಕ್ಷ ಅಣ್ಣಯ್ಯ ದಾಸ್, ಸುಂದರ ಪೂಜಾರಿ ಮೂಡುಕುಕ್ಕುಡೆ, ಮಾಜಿ ಫೆಡರೇಶನ್ ಅಧ್ಯಕ್ಷ ಮಧುಸೂಧನ್ ಹೇರೂರು, ರಾಘವೇಂದ್ರ ಪ್ರಭು ಕರ್ವಾಲು ಮುಂತಾದವರಿದ್ದರು. ರೋಟರಿ ಮಾಜಿ ಅಧ್ಯಕ್ಷ ಚಂದ್ರಶೇಖರ ಸಾಲಿಯಾನ್ ನಿರೂಪಿಸಿದರು. ಆಶಾ ಸಿಕ್ವೇರಾ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಪದ ದೇಶೀಯ ಕಲೆಗಳ ಕಾರ್ಯಾಗಾರ

ಉಡುಪಿ, ಫೆ.28: ಭಾವನಾ ಪೌಂಡೇಶನ್(ರಿ.) ಹಾವಂಜೆ ಹಾಗೂ ಭಾಸ ಗ್ಯಾಲರಿ ಮತ್ತು...

ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ: ಪದಪ್ರಧಾನ ಸಮಾರಂಭ

ಬ್ರಹ್ಮಾವರ, ಫೆ.28: ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಇದರ ನೂತನ ಅಧ್ಯಕ್ಷ...

ರಾಷ್ಟ್ರೀಯ ವಿಜ್ಞಾನ ದಿನದ ಮಹತ್ವ; ಭಾರತೀಯ ವಿಜ್ಞಾನಿಗಳ ಕೊಡುಗೆ

ಪ್ರತಿ ವರ್ಷ ಫೆಬ್ರವರಿ 28ರಂದು ಆಚರಿಸುವ ರಾಷ್ಟ್ರೀಯ ವಿಜ್ಞಾನ ದಿನವು ಕೇವಲ...

ಕುಡುಬಿ ಸಮುದಾಯದ ಕಲಾವಿದರ ಬಗ್ಗೆ ಪಠ್ಯವಾಗಲಿ: ಡಾ. ಜಾನಪದ ಎಸ್ ಬಾಲಾಜಿ

ಬ್ರಹ್ಮಾವರ, ಫೆ.27: ಮೇಕೆಕಟ್ಟು ನಂದಿಕೇಶ್ವರ ದೇಗುಲದ ಆವರಣದಲ್ಲಿ ಕನ್ನಡ ಜಾನಪದ ಪರಿಷತ್...
error: Content is protected !!