Saturday, September 5, 2026
Saturday, September 5, 2026

ಕುಂತಳನಗರ: ಬೃಹತ್ ವೈದ್ಯಕೀಯ ಮತ್ತು ರಕ್ತದಾನ ಶಿಬಿರ

ಕುಂತಳನಗರ: ಬೃಹತ್ ವೈದ್ಯಕೀಯ ಮತ್ತು ರಕ್ತದಾನ ಶಿಬಿರ

Date:

ಕಟಪಾಡಿ, ಜು.26: ರೋಟರಿ ಕ್ಲಬ್ ಮಣಿಪುರ, ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ, ರೆಡ್ ಕ್ರಾಸ್‌ ಕುಂದಾಪುರ ಬ್ಲಡ್ ಬ್ಯಾಂಕ್ ಮಿಷನ್ ಆಸ್ಪತ್ರ (ಲೋಂಬಾರ್ಡ್ ಮೆಮೋರಿಯಲ್) ಮತ್ತು ಕುಂತಳನಗರ ಸಂತ ಅಂತೋನಿ ಚರ್ಚ್ ಇದರ ಸಂಯುಕ್ತ ಆಶ್ರಯದಲ್ಲಿ ಚರ್ಚಿನ ಸಭಾಂಗಣದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಚರ್ಚಿನ ಧರ್ಮಗುರು ಸ್ಟ್ಯಾನ್ಲಿ ಲೋಬೋ, ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ. ಉತ್ತಮವಾದ ಆಹಾರ ಮತ್ತು ಜೀವನ ಶೈಲಿಯಿಂದ ರೋಗ ಬರುದನ್ನು ದೂರ ಮಾಡಬಹುದು. ಈ ನಿಟ್ಟಿನಲ್ಲಿ ಈ ರೀತಿಯ ಶಿಬಿರಗಳಿಂದ ನಮ್ಮ ಆರೋಗ್ಯ ತಪಾಸಣೆ ಮಾಡಲು ಅನುಕೂಲವಾಗುತ್ತದೆ ಎಂದರು.

ಮುಖ್ಯ ಅತಿಥಿಗಳಾಗಿ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಅಧ್ಯಕ್ಷ ಜಯಕರ ಶೆಟ್ಟಿ, ಚರ್ಚಿನ ಉಪಾಧ್ಯಕ್ಷ ಸ್ಕ್ಯಾನಿ ಡಿಸೋಜಾ, ರೋಟರಿ ಕ್ಲಬ್ ಮಣಿಪುರ ಅಧ್ಯಕ್ಷ ರಾಜೇಶ್ ನಾಯ್ಕ್, ಕಾರ್ಯದರ್ಶಿ ಎ.ಜಿ ಡಿಸೋಜ, ವೈದ್ಯರುಗಳಾದ ಡಾ ಅರ್ಜುನ್ ಬಲ್ಲಾಳ, ಡಾ.ಪವಿತ್ರಾ, ಡಾ. ವೈಭವ್ ಜಯಂಟ್ಸ್ ಅಧ್ಯಕ್ಷ ಅಣ್ಣಯ್ಯ ದಾಸ್, ಸುಂದರ ಪೂಜಾರಿ ಮೂಡುಕುಕ್ಕುಡೆ, ಮಾಜಿ ಫೆಡರೇಶನ್ ಅಧ್ಯಕ್ಷ ಮಧುಸೂಧನ್ ಹೇರೂರು, ರಾಘವೇಂದ್ರ ಪ್ರಭು ಕರ್ವಾಲು ಮುಂತಾದವರಿದ್ದರು. ರೋಟರಿ ಮಾಜಿ ಅಧ್ಯಕ್ಷ ಚಂದ್ರಶೇಖರ ಸಾಲಿಯಾನ್ ನಿರೂಪಿಸಿದರು. ಆಶಾ ಸಿಕ್ವೇರಾ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!