Saturday, February 28, 2026
Saturday, February 28, 2026

ಗ್ರಾಮೀಣ ರೈತರ ಸಬಲೀಕರಣದಲ್ಲಿ ಕೃಷಿ ಸಖಿಯರ ಪಾತ್ರ ಅತ್ಯಮೂಲ್ಯ: ಅವಿನಾಶ್

ಗ್ರಾಮೀಣ ರೈತರ ಸಬಲೀಕರಣದಲ್ಲಿ ಕೃಷಿ ಸಖಿಯರ ಪಾತ್ರ ಅತ್ಯಮೂಲ್ಯ: ಅವಿನಾಶ್

Date:

ಬ್ರಹ್ಮಾವರ, ಜು.26: ಜಿಲ್ಲಾ ಪಂಚಾಯತ್ ಉಡುಪಿ ,ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ,ಕೃಷಿ ವಿಜ್ಜಾನ ಕೇಂದ್ರ ಬ್ರಹ್ಮಾವರ ಇವರ ಆಶ್ರಯದಲ್ಲಿ ಕೃಷಿ ಜೀವನೋಪಾಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಾದ ಕೃಷಿ ಸಖಿಯರಿಗೆ 6 ದಿನದ ನೈಸರ್ಗಿಕ ಕೃಷಿ ತರಬೇತಿಯ ಸಮಾರೋಪ ಸಮಾರಂಭ ಕೃಷಿ ವಿಜ್ಜಾನ ಕೇಂದ್ರ ಬ್ರಹ್ಮವಾರ ಇಲ್ಲಿ ನೆಡೆಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಂಜೀವಿನಿ ಯೋಜನೆಯ ಜಿಲ್ಲಾ ವ್ಯವಸ್ಥಾಪಕರಾದ ಅವಿನಾಶ್ ಇವರು ಕೃಷಿ ಸಖಿಯರಿಗೆ ಪ್ರಮಾಣ ಪತ್ರ ವಿತರಿಸಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಯನ್ನು ಅಭಿವೃದ್ಧಿ ಪಡಿಸಲು ಹಾಗೂ ಕೃಷಿ ಕ್ಷೇತ್ರಕ್ಕೆ ಸಂಬಂಧಪಟ್ಟ ಸೇವೆಗಳನ್ನು ನೀಡಲು ಕೃಷಿ ಸಖಿಯರನ್ನು ಪ್ರತಿ ಗ್ರಾಮ ಪಂಚಾಯತ್ ನಲ್ಲಿ ನಿಯೋಜನೆ ಮಾಡಲಾಗಿದೆ. ಕೃಷಿ ವಿಜ್ಞಾನ ಕೇಂದ್ರದ ಅನುಭವಿ ಹಾಗೂ ಹಿರಿಯ ಕೃಷಿ ವಿಜ್ಞಾನಿಗಳಿಂದ ನೈಸರ್ಗಿಕ ಕೃಷಿ ಬಗ್ಗೆ ತರಬೇತಿ ನೀಡಲಾಗಿದೆ ಈ ತರಬೇತಿ ಪಡೆದ ಕೃಷಿ ಸಖಿಯರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೃಷಿ ಸಮುದಾಯದ ಸಂಪನ್ಮೂಲ ವ್ಯಕ್ತಿಗಳಂತೆ ಕರ್ತವ್ಯ ನಿರ್ವಹಿಸಬೇಕು. ಕೃಷಿಗೆ ಸಂಬಂಧಪಟ್ಟ ಯೋಜನೆ, ಕಾರ್ಯಕ್ರಮ,ತರಬೇತಿ, ಸೌಲಭ್ಯಗಳನ್ನು ಆದ್ಯತೆಯಲ್ಲಿ ರೈತರಿಗೆ ತಲುಪಿಸಲು ಆಸಕ್ತಿಯಿಂದ ಕರ್ತವ್ಯ ನಿರ್ವಹಿಸಬೇಕು. ಒಟ್ಟಿನಲ್ಲಿ ಗ್ರಾಮೀಣ ಪ್ರದೇಶದ ರೈತರ ಸಬಲೀಕರಣದಲ್ಲಿ ಕೃಷಿ ಸಖಿಯರ ಪಾತ್ರ ಅಮೂಲ್ಯವಾದದ್ದು ಎಂದು ತಿಳಿಸಿದರು.

ಕಾರ್ಯಕ್ರಮದ ಇನ್ನೋರ್ವ ಮುಖ್ಯ ಅತಿಥಿಗಳಾದ ಡಾ ಸುಧೀರ್ ಕಾಮತ್ ಕೆ. ವಿ ಪ್ರಾಂಶುಪಾಲರು, ಡಿಪ್ಲೊಮಾ ಕೃಷಿ ಮಹಾವಿದ್ಯಾಲಯ ಬ್ರಹ್ಮಾವರ ಇವರು ಮಾತನಾಡಿ ಕೃಷಿ ಸಖಿಯರಿಗೆ ಕೃಷಿ ವಿಜ್ಞಾನ ಕೇಂದ್ರದಿಂದ ಸಮಗ್ರ ಕೃಷಿ ಬಗ್ಗೆ ವಿವಿಧ ಹಂತದ ತರಬೇತಿ ನೀಡಲಾಗಿದೆ.ನಾಲ್ಕು ಗೋಡೆ ಮದ್ಯ ಪಡೆದ ತರಬೇತಿಯನ್ನು ಗ್ರಾಮೀಣ ಪ್ರದೇಶದ ಬಡ ರೈತರ ಸಬಲೀಕರಕ್ಕೆ ಆಸಕ್ತಿ ಇಂದ ಶ್ರಮಿಸಬೇಕೆಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ನವೀನ್ ವಿಜ್ಞಾನಿಗಳು ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮವಾರ ಇವರು ವಹಿಸಿದರು. ಕಾರ್ಯಕ್ರಮದಲ್ಲಿ ವೀಣಾ ಶ್ಯಾನುಭಾಗ್ ಗೃಹ ವಿಜ್ಞಾನ ಪದವೀಧರೆ ಪೆತ್ರಿ, ಡಾ. ಸದಾನಂದ್ ಆಚಾರ್ಯ ವಿಜ್ಞಾನಿಗಳು, ರಂಜಿತಾ ಯುವ ವೃತ್ತಿಪರರು ಸಂಜೀವಿನಿ ಯೋಜನೆ ಉಪಸ್ಥಿತರಿದ್ದರು. ಸುಜಾತಾ ಕೃಷಿ ಸಖಿ ಕರ್ಕಂಜೆ, ಅರ್ಚನಾ ಪ್ರಭು ಕೃಷಿ ಸಖಿ ಗೋಪಾಡಿ, ಪ್ರತಿಮಾ ಕೃಷಿ ಸಖಿ ಶಂಕರನಾರಾಯಣ ತರಬೇತಿ ಅನುಭವ ಹಂಚಿಕೊಂಡರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಡುಬಿ ಸಮುದಾಯದ ಕಲಾವಿದರ ಬಗ್ಗೆ ಪಠ್ಯವಾಗಲಿ: ಡಾ. ಜಾನಪದ ಎಸ್ ಬಾಲಾಜಿ

ಬ್ರಹ್ಮಾವರ, ಫೆ.27: ಮೇಕೆಕಟ್ಟು ನಂದಿಕೇಶ್ವರ ದೇಗುಲದ ಆವರಣದಲ್ಲಿ ಕನ್ನಡ ಜಾನಪದ ಪರಿಷತ್...

ಜಿಲ್ಲೆಯ ಅಗ್ನಿಶಾಮಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

ಉಡುಪಿ, ಫೆ.27: ಬೈಂದೂರು ಅಗ್ನಿಶಾಮಕ ಠಾಣೆಯ ಸಹಾಯಕ ಅಗ್ನಿಶಾಮಕ ರಾಜೇಶ್ ಹಾಗೂ...

ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಫೆ.27: ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ. ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ...

ಮಾ. 4: ಉಡುಪಿ ಕಂಬಳಕೆರೆಗೆ ಶಂಕುಸ್ಥಾಪನೆ

ಉಡುಪಿ, ಫೆ.27: ಉಡುಪಿ ಜಿಲ್ಲಾಡಳಿತ ಮತ್ತು ಯುವಜನ ಸಬಲೀಕರಣ ಇಲಾಖೆ ವತಿಯಿಂದ...
error: Content is protected !!