ಗಣಿತನಗರ, ಜು.27: ನಾವು ಬದುಕಿನಲ್ಲಿ ಸಾಧನೆ ಮಾಡಿದರೂ ಸಹ ಬದುಕು ದೇಶಕ್ಕೆ ಸಮಪಿತವಾಗಿರಲಿ ಎಂದು ಖ್ಯಾತ ವಾಗ್ಮಿ ಕು.ಅಕ್ಷಯ ಗೋಖಲೆ ನುಡಿದರು. ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ಮೌಲ್ಯಸುಧಾ ಮಾಲಿಕೆ ೩೮ರಲ್ಲಿ ಕಾರ್ಗಿಲ್ ವಿಜಯ ದಿವಸದ ಶುಭಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಖ್ಯಾತ ವಾಗ್ಮಿ ಕು.ಅಕ್ಷಯ ಗೋಖಲೆ ‘ಬಹುರತ್ನ ಪ್ರಸವೀ ಭಾರತೀ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ನಮ್ಮ ಬದುಕು ಸಮಾಜಕ್ಕೆ ಸಮರ್ಪಿತವಾಗಿರಲಿ. ಒಳ್ಳೆಯ ಆದರ್ಶದ ಅಡಿಗಲ್ಲಿನ ಮೇಲೆ ನಮ್ಮ ಭವಿಷ್ಯವನ್ನು ನಾವು ಕಟ್ಟಿಕೊಳ್ಳಬೇಕು. ಭಾರತವನ್ನು ಬೆಳಗಿಸುವಂತಹ ಮುತ್ತು ರತ್ನಗಳು ನಾವಾಗಬೇಕು. ಅದ್ಭುತ ಸೈನಿಕ ಪರಂಪರೆ ನಮ್ಮದು. ನಮ್ಮ ಸೈನಿಕರೇ ನಮಗೆ ಸ್ಫೂರ್ತಿ ಎಂದು ನುಡಿಯುತ್ತಾ, ಕಾರ್ಗಿಲ್ ವಿಜಯದಲ್ಲಿ ಬಲಿದಾನಗೈದ ವೀರ ಯೋಧರ ಯಶೋಗಾಥೆಯನ್ನು ತೆರೆದಿಟ್ಟರು.
ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಪ್ರಾಂಶುಪಾಲ ದಿನೇಶ್ ಎಂ ಕೊಡವೂರ್, ಉಪಪ್ರಾಂಶುಪಾಲರಾದ ಸಾಹಿತ್ಯ ಮತ್ತು ಉಷಾ ರಾವ್ ಯು, ಡೀನ್ ಅಕಾಡೆಮಿಕ್ಸ್ ಡಾ. ಮಿಥುನ್ ಯು., ಜ್ಞಾನಸುಧಾ ಎಂಟ್ರೆನ್ಸ್ ಅಕಾಡೆಮಿಯ ಮುಖ್ಯಸ್ಥ ಸಂದೀಪಾ ಉಪಸ್ಥಿತರಿದ್ದರು. ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಪ್ರಜ್ವಲ್ ಕುಲಾಲ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.




By
ForthFocus™