Monday, January 19, 2026
Monday, January 19, 2026

ಪಂಚವರ್ಣ: 265ನೇ ಭಾನುವಾರದ ಪರಿಸರ ಸ್ನೇಹಿ ಹಸಿರು ಜೀವ ಅಭಿಯಾನ

ಪಂಚವರ್ಣ: 265ನೇ ಭಾನುವಾರದ ಪರಿಸರ ಸ್ನೇಹಿ ಹಸಿರು ಜೀವ ಅಭಿಯಾನ

Date:

ಕೋಟ, ಜು.28: ಗಿಡ ನಡುವ ಬಗ್ಗೆ ನಿರ್ಲಕ್ಷ್ಯ ಸಲ್ಲ. ಪ್ರತಿಯೊಬ್ಬರೂ ಪರಿಸರಸ್ನೇಹಿ ವಾತಾವರಣ ನಿರ್ಮಿಸಿ ಎಂದು ಕೋಟತಟ್ಟು ಪಂಚಾಯತ್ ಸದಸ್ಯೆ ವಿದ್ಯಾ ಸಾಲಿಯಾನ್ ಕರೆ ನೀಡಿದರು. ಭಾನುವಾರ ಕೋಟತಟ್ಟು ಪಡುಕರೆಯಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್ , ಹಂದಟ್ಟು ಮಹಿಳಾ ಬಳಗ ಕೋಟ, ಗೀತಾನಂದ ಫೌಂಡೇಶನ್ ಮಣೂರು, ಅನ್ನಪೂರ್ಣ ನರ್ಸರಿ ಪೇತ್ರಿ, ಸಮುದ್ಯತಾ ಗ್ರೂಪ್ಸ್ ಕೋಟ, ಸುವರ್ಣ ಎಂಟರ್ಪ್ರೈಸಸ್ ಬ್ರಹ್ಮಾವರ, ರೋಟರಿ ಕ್ಲಬ್ ಕೋಟ ಸಿಟಿ ಇವರ ಸಹಭಾಗಿತ್ವದಡಿ 265ನೇ ಭಾನುವಾರದ ಪರಿಸರ ಸ್ನೇಹಿ ಅಭಿಯಾನದ ಪ್ರಯುಕ್ತ ಹಸಿರು ಜೀವ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕೋಟತಟ್ಟು ಪಡುಕರೆಯ ವಿವಿಧ ಭಾಗಗಳಲ್ಲಿ ೩೫ ಕ್ಕೂ ಅಧಿಕ ಮನೆಗಳಿಗೆ ತೆರಳಿ ಗಿಡಗಳನ್ನು ನೆಡೆಲಾಯಿತು.

ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ.ಮನೋಹರ್ ಪೂಜಾರಿ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಕೋಟತಟ್ಟು ಪಂಚಾಯತ್ ಸದಸ್ಯೆ ಅಶ್ವಿನಿ ದಿನೇಶ್, ಮಾಜಿ ಸದಸ್ಯೆ ಸುಜಾತ ಉದಯ್, ಉದ್ಯಮಿ ಕೇಶವ ಪುತ್ರನ್, ಗೀತಾನಂದ ಫೌಂಡೇಶನ್ ಸಮಾಜಕಾರ್ಯ ವಿಭಾಗದ ರವಿಕಿರಣ್ ಕೋಟ, ಕರ್ಣಾಟಕ ಬ್ಯಾಂಕ್ ನಿವೃತ್ತ ಅಧಿಕಾರಿ ರವೀಂದ್ರನಾಥ ಹಂದೆ, ಕೋಟತಟ್ಟು ಪಂಚಾಯತ್ ಮಾಜಿ ಅಧ್ಯಕ್ಷೆ ವಿಶ್ವಪ್ರಕಾಶನಿ ಹಂದೆ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಮತ್ತಿತರರು ಉಪಸ್ಥಿತರಿದ್ದರು. ಪಂಚವರ್ಣದ ಮಹೇಶ್ ಬೆಳಗಾವಿ ಸ್ವಾಗತಿಸಿದರು. ಅಜಿತ್ ಆಚಾರ್ ಕಾರ್ಯಕ್ರಮ ನಿರೂಪಿಸಿದರು. ರವೀಂದ್ರ ಕೋಟ ಸಂಯೋಜಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಬ್ರಿ: ಆಳುಪ ನಾಗದೇವರಸನ ಶಾಸನದ ಅಧ್ಯಯನ

ಹೆಬ್ರಿ, ಜ.18: ತಾಲೂಕಿನ ಬೆಳ್ವೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಲ್ಬಾಡಿ ಪ್ರದೇಶದ...

ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾದ ಶೀರೂರು ಪರ್ಯಾಯ

ಉಡುಪಿ, ಜ.18: ಶೀರೂರು ಮಠಾಧೀಶ ಶ್ರೀ ಶ್ರೀ ವೇದವರ್ಧನ ತೀರ್ಥರು ಶ್ರೀಕೃಷ್ಣನ...

ಸರಸ್ವತಿ ವಿದ್ಯಾಲಯ: ರಾಷ್ಟ್ರೀಯ ಯುವ ದಿನಾಚರಣೆ

ಗಂಗೊಳ್ಳಿ, ಜ.18: ಸ್ವಾಮಿ ವಿವೇಕಾನಂದರ ಜೀವನವನ್ನು ಅವಲೋಕಿಸುವ ಮೂಲಕ ನಾವು ನಮ್ಮ...

ಶಿವಯೋಗಿ ಸಿದ್ಧರಾಮರ ಕಾಯಕದ ಮಹತ್ವ ಪ್ರತಿಯೊಬ್ಬರೂ ಪಾಲಿಸುವಂತಾಗಲಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಉಡುಪಿ, ಜ.18: ಕಾಯಕದ ಮಹತ್ವವನ್ನು ತಿಳಿಸಿದ ಶಿವಯೋಗಿ ಸಿದ್ದರಾಮರ ತತ್ವ ಆದರ್ಶಗಳನ್ನು...
error: Content is protected !!