Saturday, February 28, 2026
Saturday, February 28, 2026

ಆ.3: ಬನ್ನಂಜೆ 90 ಉಡುಪಿ ನಮನ

ಆ.3: ಬನ್ನಂಜೆ 90 ಉಡುಪಿ ನಮನ

Date:

ಉಡುಪಿ, ಜು.30: ವಿದ್ಯಾವಾಚಸ್ಪತಿ ಪದ್ಮಶ್ರೀ ಬನ್ನಂಜೆ ಗೋವಿಂದಾಚಾರ್ಯ ನೆನಪಿನ ಬನ್ನಂಜೆ 90 ಉಡುಪಿ ನಮನ ಕಾರ್ಯಕ್ರಮ ಆಗಸ್ಟ್ 3 ರಂದು ಭಾನುವಾರ ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ಉಡುಪಿಯ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಬಹಳ ಅರ್ಥಪೂರ್ಣವಾಗಿ ನಡೆಯಲಿದೆ ಎಂದು ಸಮಿತಿಯ ಪ್ರಧಾನ ಸಂಚಾಲಕರಾದ ರವಿರಾಜ್ ಎಚ್ .ಪಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಬನ್ನಂಜೆ ಗೋವಿಂದ ಆಚಾರ್ಯ ಪ್ರತಿಷ್ಠಾನ (ರಿ) ಬೆಂಗಳೂರು ಇದರ ಬೆಳಕಿನ ಅಡಿಯಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠ, ಹಾಗೂ ಎಂಜಿಎಂ ಕಾಲೇಜು ಉಡುಪಿ ಇವರ ಸಾಂಗತ್ಯದಲ್ಲಿ ನಡೆಯುವ ಒಂದು ದಿನದ ಈ ಕಾರ್ಯಕ್ರಮದಲ್ಲಿ ಬೆಳಗ್ಗೆ 8 ಗಂಟೆಗೆ ಬನ್ನಂಜೆ ಅವರ ಮೂಡುಬೆಟ್ಟಿನ ಮೂಲ ಮನೆಯ ಬ್ರಹ್ಮಸ್ಥಾನ ಮತ್ತು ನಾಗ ಸ್ಥಾನದ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಗುತ್ತದೆ. 8:30 ಕ್ಕೆ ಬನ್ನಂಜೆಯವರು ಕಲಿತ ಆದಿಉಡುಪಿ ಶಾಲೆಯಿಂದ ಬನ್ನಂಜೆಯವರ ಭಾವಚಿತ್ರದೊಂದಿಗೆ ಮೆರವಣಿಗೆ ಎಂಜಿಎಂ ಕಾಲೇಜಿನವರಿಗೆ ನಡೆಯಲಿದ್ದು, ಮೆರವಣಿಗೆಗೆ ಚಾಲನೆಯನ್ನು ನಾಡೋಜ ಪ್ರೊ ಕೆ. ಪಿ. ರಾವ್ ಅವರು ನೀಡಲಿದ್ದಾರೆ.

ಬೆಳಗ್ಗೆ 9:20ಕ್ಕೆ ಬನ್ನಂಜೆಯವರ ಕೃತಿ ಆಧಾರಿತ ಯಕ್ಷಗಾನ ಪ್ರಸ್ತುತಿ ಕಾರ್ಯಕ್ರಮವಿರುತ್ತದೆ. ಬೆಳಗ್ಗೆ 10 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಕರ್ನಾಟಕದ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಶ್ರೀ ವೇದವ್ಯಾಸಾಚಾರ್ಯ ಶ್ರೀಶಾನಂದರು ಉದ್ಘಾಟಿಸಲಿದ್ದು, ಛಾಯಾಚಿತ್ರ ಹಾಗೂ ಬನ್ನಂಜೆಯವರು ಬಳಸುತ್ತಿದ್ದ ವಸ್ತು ಪ್ರದರ್ಶನವನ್ನು ತರಂಗದ ವ್ಯವಸ್ಥಾಪಕ ಸಂಪಾದಕರಾದ ಸಂಧ್ಯಾ ಪೈಯವರು ಉದ್ಘಾಟಿಸುತ್ತಾರೆ. ಸಭಾಧ್ಯಕ್ಷತೆಯನ್ನು ನಾಡಿನ ಹಿರಿಯ ಸಾಹಿತಿ ವೈದೇಹಿ ಅವರು ವಹಿಸಿಕೊಳ್ಳಲಿದ್ದಾರೆ.

ಸಭಾ ಕಾರ್ಯಕ್ರಮದಲ್ಲಿ ಬನ್ನಂಜೆಯವರ ಕವಿತೆಗಳ ಹಾಡನ್ನು ಕವಿತಾ ಉಡುಪ ಹಾಗೂ ಸುಮಾ ಶಾಸ್ತ್ರಿಯವರು ನಡೆಸಿಕೊಡಲಿದ್ದಾರೆ. ನಂತರ ಬೆಳಗ್ಗೆ ಹಾಗೂ ಮಧ್ಯಾಹ್ನ ನಾಡಿನ ಹಿರಿಯ ವಿದ್ವಾಂಸರಿಂದ ಬನ್ನಂಜೆಯವರ ಕುರಿತಾದ 2 ಗೋಷ್ಠಿಗಳು ನಡೆಯಲಿದ್ದು, ಗೋಷ್ಠಿಯಲ್ಲಿ ಶ್ರೀ ಬ್ರಹ್ಮಣ್ಯಾಚಾರ್ಯ, ಶ್ರೀಕಾಂತ್ ಶೆಟ್ಟಿ ಕಾರ್ಕಳ, ಪಾದೇಕಲ್ಲು ವಿಷ್ಣುಭಟ್, ನಿತ್ಯಾನಂದ ಪಡ್ರೆ, ಎಂ.ಎಲ್. ಸಾಮಗ, ಗಣನಾಥ್ ಎಕ್ಕಾರ್ ಭಾಗವಹಿಸಲಿದ್ದಾರೆ.

ಸಮಾರೋಪ ಸಮಾರಂಭ ವಿದ್ಯಾಭೂಷಣರ ಸಭಾಧ್ಯಕ್ಷತೆಯಲ್ಲಿ ಸಮಾರೋಪನುಡಿಯನ್ನು ಗಂಗಾವತಿ ಪ್ರಾಣೇಶ್ ಅವರು ನೆರವೇರಿಸಿಕೊಡಲಿದ್ದಾರೆ. ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನು ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನದ ಅಧ್ಯಕ್ಷರಾದ ಮಲ್ಲೇಪುರಂ ಜಿ ವೆಂಕಟೇಶ್ ನಿರ್ವಹಿಸುತ್ತಾರೆ. ಸಭಾ ಕಾರ್ಯ ಕ್ರಮದ ನಂತರ ಸಂಜೆ 5:30ಕ್ಕೆ ವಿದ್ಯಾಭೂಷಣರಿಂದ ಆಚಾರ್ಯರ ಹಾಡುಗಳ ಹಾಡು, ನಾದ ಲಹರಿ ಕಾರ್ಯಕ್ರಮ ನಡೆಯಲಿದೆ.

ಬನ್ನಂಜೆ 90 ಉಡುಪಿ ನಮನದ ಶುಭ ಯಾತ್ರೆಯು ಆಗಸ್ಟ್ 2ನೇ ತಾರೀಖು ಸಂಜೆ 4.30ಕ್ಕೆ ರಾಜಾಂಗಣದಲ್ಲಿ ಶ್ರೀ ಸುಗುಣೇಂದ್ರ ತೀರ್ಥರ ಆಶೀರ್ವಾದದೊಂದಿಗೆ ಆರಂಭ ಆಗುತ್ತದೆ. ಪರಂಪರೆಯಿಂದ ಆಚಾರ್ಯರ ಕುಟುಂಬ ಕ್ಕೆ ಅವಿನಾಭಾವ ಸಂಬಂಧ ಇರುವ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥರ ಆಶೀರ್ವಚನ ಮತ್ತು ಆಚಾರ್ಯರನ್ನು ಬಲ್ಲ ಹಿರಿಯರ ಹಿತನುಡಿಗಳಿವೆ. ಅಂದು ಸುಚೇಂದ್ರ ಪ್ರಸಾದ್ ನಿರ್ದೇಶನ ಮತ್ತು ಅಭಿನಯದ ಪಿತಾಮಹ ಎಂಬ ಆಚಾರ್ಯರ ತಂದೆಯವರ ಜೀವನ ಚರಿತ್ರೆಯ ನಾಟಕ ಪ್ರದರ್ಶನವೂ ಇದೆ.

ಪತ್ರಿಕಾಗೋಷ್ಠಿಯಲ್ಲಿ ಆಯೋಜನಾ ಸಮಿತಿಯ ಅಧ್ಯಕ್ಷ ಉಡುಪಿ ವಿಶ್ವನಾಥ್ ಶೆಣೈ, ​ಸಮಿತಿಯ ಉಪಾಧ್ಯಕ್ಷರಾದ ​ರಂಗ ಪೈ, ಕೋಶಾಧಿಕಾರಿ ಪ್ರೊ. ಸದಾಶಿವ ರಾವ್, ಸಂಚಾಲಕ ಜನಾರ್ದನ ಕೊಡವೂರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಪದ ದೇಶೀಯ ಕಲೆಗಳ ಕಾರ್ಯಾಗಾರ

ಉಡುಪಿ, ಫೆ.28: ಭಾವನಾ ಪೌಂಡೇಶನ್(ರಿ.) ಹಾವಂಜೆ ಹಾಗೂ ಭಾಸ ಗ್ಯಾಲರಿ ಮತ್ತು...

ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ: ಪದಪ್ರಧಾನ ಸಮಾರಂಭ

ಬ್ರಹ್ಮಾವರ, ಫೆ.28: ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಇದರ ನೂತನ ಅಧ್ಯಕ್ಷ...

ರಾಷ್ಟ್ರೀಯ ವಿಜ್ಞಾನ ದಿನದ ಮಹತ್ವ; ಭಾರತೀಯ ವಿಜ್ಞಾನಿಗಳ ಕೊಡುಗೆ

ಪ್ರತಿ ವರ್ಷ ಫೆಬ್ರವರಿ 28ರಂದು ಆಚರಿಸುವ ರಾಷ್ಟ್ರೀಯ ವಿಜ್ಞಾನ ದಿನವು ಕೇವಲ...

ಕುಡುಬಿ ಸಮುದಾಯದ ಕಲಾವಿದರ ಬಗ್ಗೆ ಪಠ್ಯವಾಗಲಿ: ಡಾ. ಜಾನಪದ ಎಸ್ ಬಾಲಾಜಿ

ಬ್ರಹ್ಮಾವರ, ಫೆ.27: ಮೇಕೆಕಟ್ಟು ನಂದಿಕೇಶ್ವರ ದೇಗುಲದ ಆವರಣದಲ್ಲಿ ಕನ್ನಡ ಜಾನಪದ ಪರಿಷತ್...
error: Content is protected !!