Monday, July 27, 2026
Monday, July 27, 2026

ರೋಹಿಣಿ ಸಿಂಧೂರಿ ಅವರಿಂದ ನವದುರ್ಗಾ ಲೇಖನ ಸಂಕಲ್ಪ ಸ್ವೀಕಾರ

ರೋಹಿಣಿ ಸಿಂಧೂರಿ ಅವರಿಂದ ನವದುರ್ಗಾ ಲೇಖನ ಸಂಕಲ್ಪ ಸ್ವೀಕಾರ

Date:

ಕಾಪು, ಆ.2: ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಐಎಎಸ್ ಶುಕ್ರವಾರ ಬೆಳಿಗ್ಗೆ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನ ಪಡೆದರು.

ಸೇವೆಗಳ ಬಗ್ಗೆ ಮಾಹಿತಿ ಪಡೆದುಕೊಂಡ ಅವರು, ನವದುರ್ಗಾ ಲೇಖನ ಯಜ್ಞ ಪುಸ್ತಕವನ್ನು ಪಡೆದುಕೊಂಡರು, ತಾನು ಹಾಗೂ ಕುಟುಂಬದ ಎಲ್ಲ ಸದಸ್ಯರು ಈ ಲೇಖನವನ್ನು ಬರೆದು ಶ್ರೀ ಕ್ಷೇತ್ರಕ್ಕೆ ಶಾಶ್ವತ ಪೂಜೆಯೊಂದಿಗೆ ಸಮರ್ಪಿಸಲಿದ್ದೇವೆ ಎಂದರು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿದರು.

ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಅವರನ್ನು ಗೌರವಿಸಲಾಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಸದಸ್ಯ ರವೀಂದ್ರ ಮಲ್ಲಾರ್, ಪ್ರಬಂಧಕ ಗೋವರ್ಧನ್ ಸೇರಿಗಾರ್ ಮತ್ತು ಸಿಬ್ಬಂದಿ ಲಕ್ಷ್ಮಣ್ ಕೆ.ಶೆಟ್ಟಿ ಮಂಡೇಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದು ಹೆಮ್ಮೆಯ ಕ್ಷಣ: ಕಾರ್ಗಿಲ್ ಯೋಧ ಅನಂತಪದ್ಮನಾಭ ನಾಯಕ್

ಶಿರ್ವ, ಜು.26: 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶದ ಪರವಾಗಿ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ: ಸಿದ್ದರಾಮಯ್ಯ

ಬೆಂಗಳೂರು, ಜು.26: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ....
error: Content is protected !!