ಚೇರ್ಕಾಡಿ, ಆ.3: ಅಗಸ್ಟ್ 2 ರ ಶನಿವಾರದಂದು ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಉಡುಪಿಯಲ್ಲಿ ರಾಷ್ಟ್ರೋತ್ಥಾನ ರಕ್ತಕೇಂದ್ರದ ಸಹಯೋಗದೊಂದಿಗೆ ಥಾಲಸೆಮಿಯಾ ಪೀಡಿತ ಮಕ್ಕಳಿಗೆ ನೆರವಾಗುವ ಉದ್ದೇಶದಿಂದ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳ ಪಾಲಕರ ಮುಖೇನ ದೀಪ ಬೆಳಗಿಸಿ ವಿದ್ಯಾಭಾರತಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ವಿದ್ಯುಕ್ತವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ ಚೇರ್ಕಾಡಿ ಪ್ರಧಾನಾಚಾರ್ಯೆ ಪೂರ್ಣಿಮಾ ಎಸ್. ಡಿ., ಆಡಳಿತಾಧಿಕಾರಿ ಸುರೇಶ್ ಹೆಜಮಾಡಿ, ರಾಷ್ಟ್ರೋತ್ಥಾನ ರಕ್ತ ಕೇಂದ್ರದ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳ ಪೋಷಕರು, ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಶಿಬಿರದಲ್ಲಿ 160 ಯುನಿಟ್ ರಕ್ತ ಸಂಗ್ರಹವಾಯಿತು.




By
ForthFocus™