Saturday, February 7, 2026
Saturday, February 7, 2026

ಕ್ರಿಯೇಟಿವ್ ಪುಸ್ತಕಧಾರೆ; 22 ಕೃತಿಗಳ ಅನಾವರಣ

ಕ್ರಿಯೇಟಿವ್ ಪುಸ್ತಕಧಾರೆ; 22 ಕೃತಿಗಳ ಅನಾವರಣ

Date:

ಕಾರ್ಕಳ, ಆ.13: ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಕ್ರಿಯೇಟಿವ್ ಪುಸ್ತಕ ಧಾರೆ – 2025 ಕಾರ್ಯಕ್ರಮ ನಡೆಯಿತು. ಕ್ರಿಯೇಟಿವ್ ಪುಸ್ತಕಮನೆ ಪ್ರಕಾಶನದ ವತಿಯಿಂದ 22 ಕೃತಿಗಳ ಅನಾವರಣ ನಡೆಯಿತು. ಉದ್ಘಾಟಕರಾಗಿ ಆಗಮಿಸಿದ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ. ಕೆ. ಚಿನ್ನಪ್ಪ ಗೌಡ ಮಾತನಾಡುತ್ತಾ, ಪುಸ್ತಕವೆಂದರೆ ಕೇವಲ ಅಕ್ಷರಗಳ ಸಂಗ್ರಹವಲ್ಲ. ಅದು ಕಾಲ, ಸಮಾಜ ಮತ್ತು ಮಾನವನ ಭಾವನೆಗಳ ಪ್ರತಿಬಿಂಬ. ಇಂತಹ ಕಾರ್ಯಕ್ರಮಗಳು ಓದುವ ಅಭ್ಯಾಸವನ್ನು ಪುನರುಜ್ಜೀವನಗೊಳಿಸುತ್ತವೆ ಎಂದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಖ್ಯಾತ ಸಾಹಿತಿಗಳು ಹಾಗೂ ಚಿತ್ರ ನಿರ್ದೇಶಕರಾದ ಡಾ. ನಾಗತಿಹಳ್ಳಿ ಚಂದ್ರಶೇಖರ್, ಪುಸ್ತಕವೆಂದರೆ ಕೇವಲ ಹಾಳೆಗಳ ಗುಚ್ಛವಲ್ಲ. ಅದು ಕಾಲದ ಸ್ಮರಣೆ, ಸಮಾಜದ ಕನ್ನಡಿ ಮತ್ತು ಮನಸ್ಸಿನ ಆಳದಿಂದ ಹೊರ ಹೊಮ್ಮುವ ಭಾವಧಾರೆ ಮತ್ತು ಮಾನವನ ಮನಸ್ಸಿನ ನಕ್ಷೆಯೇ ಆಗಿದೆ ಎಂದರು. ಸಹ ಸಂಸ್ಥಾಪಕರಾದ ಅಶ್ವತ್ ಎಸ್.ಎಲ್ ರವರು ಸ್ವಾಗತಗೈಯುತ್ತಾ ತಮ್ಮ ಪ್ರಾಸ್ತಾವಿಕ ನುಡಿಗಳಲ್ಲಿ ಲೇಖಕರು ತಮ್ಮ ವಿಚಾರಧಾರೆಯ ನದಿಗಳನ್ನು ಕೃತಿಗಳಲ್ಲಿ ಹರಿಸಿದ್ದಾರೆ. ಓದುಗರು ಅದರ ತೀರದಲ್ಲಿ ನಿಂತು ಚಿಂತನೆಗಳ ನೀರನ್ನು ಕುಡಿಯುವಂತಿದೆ. ಇಂತಹ ಸಾಹಿತ್ಯವು ಕಾಲವನ್ನು ಮೀರಿ ನೆನಪಿನ ಮಡಿಲಿನಲ್ಲಿ ಉಳಿಯುತ್ತವೆ ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಕೊಂಡಳ್ಳಿ ಪ್ರಭಾಕರ ಶೆಟ್ಟಿ, ಸಾಹಿತಿಗಳು ಮತ್ತು ಅಧ್ಯಕ್ಷರು, ಕ.ಸಾ.ಪ ಕಾರ್ಕಳ ತಾಲೂಕು ಇವರು ಮಾತನಾಡಿ ಇಂದಿನ ಯಾಂತ್ರಿಕ ಜೀವನದಲ್ಲಿ ಓದಿನ ಮಹತ್ವವನ್ನು ಮರೆಯುತ್ತಿರುವಾಗ, ಇಂತಹ ಪುಸ್ತಕ ಬಿಡುಗಡೆಗಳು ಸಾಹಿತ್ಯ ಪ್ರೇಮಿಗಳಿಗೆ ಹೊಸ ಚೈತನ್ಯ ತುಂಬುತ್ತವೆ ಎಂದರು. ಇನ್ನೋರ್ವ ಮುಖ್ಯ ಅತಿಥಿ ಡಾ. ಪ್ರದೀಪ ಕುಮಾರ ಹೆಬ್ರಿ, ಮಹಾಕಾವ್ಯಗಳ ಲೇಖಕರು, ಮಂಡ್ಯ ಇವರು ಮಾತನಾಡುತ್ತಾ ಪುಸ್ತಕದ ಜೀವನ ಅದರ ಓದುಗರ ಕೈಯಲ್ಲಿ ಪ್ರಾರಂಭವಾಗುತ್ತದೆ. ಉಳಿಸಿ ಬೆಳೆಸಬೇಕಾದದ್ದು ಸಹೃದಯರ ಕರ್ತವ್ಯ ಎಂದು ಹೇಳಿದರು. ಕಥೆಗಳ ಮೂಲಕ ಸಭಾಸದರ ಗಮನ ಸೆಳೆದರು.

ಸಭಾಧ್ಯಕ್ಷತೆಯನ್ನು ವಹಿಸಿದ ಸಹ ಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್ ರವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಸಾಹಿತ್ಯವು ಜನರ ಬದುಕಿಗೆ ಕನ್ನಡಿಯಂತೆ. ಓದುಗರು ಪುಸ್ತಕದಿಂದ ಕಥೆಗಳನ್ನು ಮಾತ್ರವಲ್ಲ, ಬದುಕಿನ ಮೌಲ್ಯಗಳನ್ನು, ಸಂಬಂಧಗಳ ಅರ್ಥವನ್ನು, ಮನುಷ್ಯತ್ವದ ಸಾರವನ್ನು ಪಡೆದುಕೊಳ್ಳುತ್ತಾರೆ ಎಂದರು. ಕ್ರಿಯೇಟಿವ್ ಪುಸ್ತಕ ಮನೆಯ ವತಿಯಿಂದ ಡಾ. ನಾಗತಿಹಳ್ಳಿ, ಡಾ.ಕೆ.ಚಿನ್ನಪ್ಪ ಗೌಡ Regioಹಾಗೂ 22 ಕೃತಿಗಳ ಕರ್ತೃಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಅಪರಾಹ್ನ 2. 30 ರಿಂದ ನಾಗತಿಹಳ್ಳಿ ಚಂದ್ರಶೇಖರ ಅವರ ಚಲನಚಿತ್ರಗಳಲ್ಲಿ ಬಳಸಿರುವ ಭಾವಗೀತೆಗಳ ಗಾಯನದ ಜೊತೆಗೆ ಸಂವಾದ ಕಾರ್ಯಕ್ರಮ ನಡೆಯಿತು. ನಿರೂಪಕ ಅವಿನಾಶ್ ಕಾಮತ್ ರವರು ಸಂವಾದ ಕಾರ್ಯಕ್ರಮ ನಿರ್ವಹಿಸಿಕೊಟ್ಟರು. ಜೀ ಸರಿಗಮಪ ಮತ್ತು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಖ್ಯಾತಿಯ ಯಶವಂತ್ ಎಂ.ಜಿ ಇವರಿಂದ ಗೀತೆಗಳ ಗಾಯನ ಕಾರ್ಯಕ್ರಮ ನಡೆಯಿತು. ಸಹ ಸಂಸ್ಥಾಪಕರಾದ ಅಮೃತ್ ರೈ, ಗಣನಾಥ ಶೆಟ್ಟಿ ಬಿ, ಗಣಪತಿ ಭಟ್ ಕೆ.ಎಸ್, ವಿಮಲ್ ರಾಜ್.ಜಿ, ಆದರ್ಶ ಎಂ.ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕ – ಉಪನ್ಯಾಸಕೇತರ ವರ್ಗದವರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗಿಗಳಾಗಿದ್ದರು. ಜೀವಶಾಸ್ತ್ರ ವಿಭಾಗ ಮುಖ್ಯಸ್ಥರಾದ ಲೋಹಿತ್ ಎಸ್.ಕೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!