ಉಡುಪಿ, ಆ.19: ಉಡುಪಿ ಜಿಲ್ಲಾ ಆಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ (ರಿ.) ಮತ್ತು ಉಡುಪಿ ಜಿಲ್ಲಾ ಕಿರಿಯರ ಅಥ್ಲೆಟಿಕ್ ಮೀಟ್ ಸಹಯೋಗದಲ್ಲಿ 23-08-2025 ರಿಂದ ದಿನಾಂಕ 26-08-2025 ವರೆಗೆ ಉಡುಪಿಯಲ್ಲಿ ಆಯೋಜಿಸಿರುವ ಕರ್ನಾಟಕ ರಾಜ್ಯ ಕಿರಿಯರ ಮತ್ತು 23ರ ವಯೋಮಿತಿಯ ರಾಜ್ಯಮಟ್ಟದ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕರ್ನಾಟಕ ರಾಜ್ಯ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷರು, ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರನ್ನು ಭೇಟಿಯಾಗಿ ಆಮಂತ್ರಣ ನೀಡಲಾಯಿತು.
ಮಾಜಿ ಶಾಸಕ ಕೆ. ರಘುಪತಿ ಭಟ್, ಕರ್ನಾಟಕ ರಾಜ್ಯ ಅಥ್ಲೆಟಿಕ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಸಿ.ಎ. ರಾಜವೇಲು, ಜಂಟಿ ಕಾರ್ಯದರ್ಶಿ ಉಮೇಶ್, ಉಡುಪಿ ಜಿಲ್ಲಾ ಆಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ (ರಿ.) ಅಧ್ಯಕ್ಷರಾದ ಹರಿಪ್ರಸಾದ್ ರೈ ಮತ್ತು ಇತರರು ಉಪಸ್ಥಿತರಿದ್ದರು.




By
ForthFocus™