ಉಡುಪಿ, ಆ.20: ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಪಂಚಾಯತ್ ಜೇನು ಸಾಕಾಣಿಕೆ ಯೋಜನೆಯಡಿ ಜೇನು ಕೃಷಿ ಪ್ರೋತ್ಸಾಹಕ್ಕಾಗಿ ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕಿನ ರೈತರಿಗೆ ಎರಡು ದಿನಗಳ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದ್ದು, ತರಬೇತಿ ಪಡೆಯಲಿಚ್ಛಿಸುವ ಆಸಕ್ತ ರೈತರು ಆಗಸ್ಟ್ 25 ರ ಒಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆ ಮೊ.ನಂ: 8095991105 ಹಾಗೂ 9008284192 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.




By
ForthFocus™