ಉಡುಪಿ, ಆ.21: ಕರ್ನಾಟಕ ಸರಕಾರದ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಆಗಸ್ಟ್ 23 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಗ್ಗೆ 11 ರಿಂದ 12.30 ರ ವರೆಗೆ ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಉಡುಪಿ ಜಿಲ್ಲಾ ಅಮೆಚ್ಯೂರ್ ಅಥ್ಲೆಟಿಕ್ ಸಂಸ್ಥೆಯ ಆಶ್ರಯದಲ್ಲಿ ಜರುಗಲಿರುವ ಕರ್ನಾಟಕ ಸ್ಟೇಟ್ ಇಂಟರ್ ಡಿಸ್ಟಿçಕ್ಟ್ ಅಥ್ಲೆಟಿಕ್ ಚಾಂಪಿಯನ್ಶಿಷ್ -2025 ಉದ್ಘಾಟನಾ ಸಮಾರಂಭ, ಮಧ್ಯಾಹ್ನ 2 ಗಂಟೆಗೆ ಮಣಿಪಾಲದ ಮಣಿಪಾಲ್ ಅಕಾಡೆಮಿ ಆಫ್ ಹೈರ್ ಎಜುಕೇಶನ್ಗೆ ಭೇಟಿ, 3 ಗಂಟೆಗೆ ನಗರದ ಓಶಿಯನ್ ಪರ್ಲ್ ಹೋಟೆಲ್ನಲ್ಲಿ ರಾಜ್ಯ ಅಥ್ಲೆಟಿಕ್ಸ್ ಸಂಸ್ಥೆಯ ವಾರ್ಷಿಕ ಮಹಾಸಭೆಯಲ್ಲಿ ಭಾಗಿ, ಸಂಜೆ 4.30 ಕ್ಕೆ ಕಾಪುವಿನ ರಾಜೀವ್ ಗಾಂಧಿ ಭವನದಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಮಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
ಗೃಹ ಸಚಿವರ ಪ್ರವಾಸ ಕಾರ್ಯಕ್ರಮ
ಗೃಹ ಸಚಿವರ ಪ್ರವಾಸ ಕಾರ್ಯಕ್ರಮ
Date:




By
ForthFocus™