Tuesday, September 8, 2026
Tuesday, September 8, 2026

ಉಡುಪಿ ಜ್ಞಾನಸುಧಾ: ನಿವೃತ್ತ ಶಿಕ್ಷಕರಿಗೆ ಸನ್ಮಾನ

ಉಡುಪಿ ಜ್ಞಾನಸುಧಾ: ನಿವೃತ್ತ ಶಿಕ್ಷಕರಿಗೆ ಸನ್ಮಾನ

Date:

ಉಡುಪಿ, ಸೆ.5: ಭಗವಂತನೇ ಧರೆಗಿಳಿದು ಬಂದಾಗ ಅವನಿಗೆ ಮಾರ್ಗದರ್ಶನ ನೀಡಿದ್ದು ಗುರುಗಳು. ಇಂತಹ ಭವ್ಯ ಗುರು ಪರಂಪರೆ ಹೊಂದಿರುವ ಭಾರತದಲ್ಲಿ ಹುಟ್ಟಿದ ನಾವೇ ಧನ್ಯರು. ಗುರು ತೋರಿದ ಮಾರ್ಗದಲ್ಲಿ ನಡೆದ ಯಾವ ವಿದ್ಯಾರ್ಥಿಯೂ ಬದುಕಿನಲ್ಲಿ ಅದಃಪತನಕ್ಕೆ ಹೋಗಲಾರನು. ಜ್ಞಾನಸುಧಾದಲ್ಲಿ ಬದುಕಿನ ಸಾಧನೆಗಳನ್ನು ಶಾಶ್ವತವಾಗಿಸಬಲ್ಲ ಜ್ಞಾನವೆಂಬ ಅಮೃತವನ್ನು ಪಡೆದು ಸುಂದರ ಬದುಕನ್ನು ಕಟ್ಟಿಕೊಳ್ಳಿ. ಮನೋನಿಯಂತ್ರಣದ ಜೊತೆಗೆ ಸಚ್ಚಾರಿತ್ರ್ಯಯದ ಬದುಕು ನಿಮ್ಮದಾಗಲಿ ಎಂದು ಖ್ಯಾತ ವಾಗ್ಮಿಗಳಾಗಿರುವ ಎನ್ ಆರ್ ದಾಮೋದರ ಶರ್ಮ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಹೇಳಿದರು. ಇವರು ಉಡುಪಿ ಜ್ಞಾನಸುಧಾ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ಹೆತ್ತವರ ಮನಸ್ಸು ನೋಯಿಸದಂತೆ ನೋಡಿಕೊಳ್ಳುವ ಗುರುತರ ಜವಾಬ್ದಾರಿ ನಿಮ್ಮದು. ವನಸುಮದಂತೆ ಯಾವುದೇ ಫಲಾಪೇಕ್ಷೆಯಿಲ್ಲದೆ ಬದುಕ ನಡೆಸಿದ ಎಲ್ಲಾ ಶಿಕ್ಷಕರುಗಳ ಜೀವನಧಾರೆ ನಮಗೆ ಮಾದರಿಯಾಗಲಿ ಎಂದರು. ಸನ್ಮಾನವನ್ನು ಸ್ವೀಕರಿಸಿದ ಮುರಲಿ ಕಡೆಕಾರ್ ಮಾತನಾಡಿ ದೇವರು ಕೊಟ್ಟ ಶ್ರೇಷ್ಠ ಜೀವನವನ್ನು ಹಾಳುಮಾಡಿಕೊಳ್ಳಬೇಡಿ. ಗಣಿತಕ್ಕಾಗಿ ಒಂದು ನಗರವನ್ನು ಕಟ್ಟಿ ಬೆಳೆಸುವ ಶ್ರಮ ಸಾಮಾನ್ಯವಾದುದಲ್ಲ. ವಿದ್ಯಾರ್ಜನೆಗೆ ಬಂದ ನಿಮಗೆ ಡಾ. ಸುಧಾಕರ ಶೆಟ್ಟಿಯವರೇ ಮಾದರಿ ವ್ಯಕ್ತಿತ್ವ ಅವರಂತೆ ಬಾಳಿ ಬದುಕಿ ಎಂದು ಶುಭ ಹಾರೈಸಿದರು.

ನಿಟ್ಟೂರು ಪ್ರೌಢ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಮುರಲಿ ಕಡೆಕಾರ್, ಕಮಲಾಬಾಯಿ ಪ್ರೌಢ ಶಾಲೆ ಕಡಿಯಾಳಿ ಇಲ್ಲಿಯ ನಿವೃತ್ತ ಮುಖ್ಯೋಪಾಧ್ಯಾಯರಾದ ಸುದರ್ಶನ್ ನಾಯಕ್, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿಯ ನಿವೃತ್ತ ಶಿಕ್ಷಕರಾದ ಶ್ರೀಮತಿ ಎಚ್ ಎಮ್ ಯಶೋಧ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹನುಮಂತನಗರ ಇಲ್ಲಿಯ ನಿವೃತ್ತ ಮುಖ್ಯೋಪಾಧ್ಯಾಯರಾದ ಸುಧಾಕರ ಎನ್ ಇವರನ್ನು ಸನ್ಮಾನಿಸಲಾಯಿತು.

ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್‌ರವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಪ್ರಾಂಶುಪಾಲರಾದ ಪ್ರಕಾಶ್ ಜೋಗಿ ವಂದಿಸಿ, ಕನ್ನಡ ಉಪನ್ಯಾಸಕಿ ಶ್ರೀಮತಿ ಪವಿತ್ರ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ, ಸೆ.7: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ...

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಭಾಗಿ

ಕಾರ್ಕಳ, ಸೆ.7: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್...

ಸರಸ್ವತಿ ವಿದ್ಯಾಲಯದಲ್ಲಿ ಇ ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮ

ಗಂಗೊಳ್ಳಿ, ಸೆ.7: ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ...

ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ, ಸೆ.7: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ...
error: Content is protected !!