ಉಡುಪಿ, ಸೆ.9: ಶತಮಾನೋತ್ಸವದ ಹೊಸ್ತಿಲಲ್ಲಿರುವ ಆರ್.ಕೆ.ಪಾಟ್ಕರ್ ಅನುದಾನಿತ ಶಾರದಾ ವಿದ್ಯಾಸಂಸ್ಥೆಯಲ್ಲಿ ವಿದ್ಯಾ ಸಂಕಲ್ಪ ಸಮಾವೇಶ ಮತ್ತು ಮಹಾಸಭೆಯನ್ನು ನಡೆಯಿತು. ಸ್ವಾತಂತ್ರ್ಯ ಪೂರ್ವದಲ್ಲಿ ಹಿರಿಯರು ದಾನವಾಗಿ ನೀಡಿದ ಜಾಗದಲ್ಲಿ ಶಾಲೆಯನ್ನು ನಿರ್ಮಿಸಿದ್ದು ಈ ಶಾಲೆಯು ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿದೆ. ನೂರು ವರ್ಷಗಳ ಸನಿಹದಲ್ಲಿರುವ ಈ ಶಾಲೆಯ ಕೆಲ ಕಟ್ಟಡಗಳು ಶಿಥಿಲವಾಗಿದೆ. ಹೀಗಾಗಿ ಕೆಲವು ಕಟ್ಟಡಗಳನ್ನು ತೆರವುಗೊಳಿಸಿ ಶತಮಾನೋತ್ಸವ ಸಂದರ್ಭದಲ್ಲಿ ಐದು ಕೋಟಿ ರೂಪಾಯಿ ವೆಚ್ಚದಲ್ಲಿ ಆಧುನಿಕ ಶಿಕ್ಷಣ ವ್ಯವಸ್ಥೆಗೆ ಪೂರಕವಾಗಿ ಹೊಸ ಕಟ್ಟಡವನ್ನು ನಿರ್ಮಿಸುವ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಯಿತು.
ಫಾರ್ಮ ಕಂಪನಿಯ ಮಾಜಿ ಸಿಇಓ ಪಿ. ಆತ್ಮರಾಮ ಪಾಟೀಲ್ರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿ ಮನವಿ ಪತ್ರವನ್ನು ಬಿಡುಗಡೆ ಮಾಡಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಪ್ರಾಂತ ಕಾರ್ಯವಾಹ ಡಾ. ಜಯಪ್ರಕಾಶ್ ಮಾತನಾಡಿ, ಈ ಶಾಲೆ ನಮ್ಮ ದೇಶದ ಆಸ್ತಿಯಾಗಬೇಕು. ಇದರ ಅಭಿವೃದ್ಧಿ ನಮ್ಮ ಮೊದಲ ಆದ್ಯತೆಯಾಗಿಬೇಕು. ವಿದ್ಯಾರ್ಥಿಗಳನ್ನು ರಾಷ್ಟ್ರೀಯತೆಯನ್ನು ಪಸರಿಸುವ ಶಿಕ್ಷಣದ ಜೊತೆಗೆ ಬೆಳೆಸುವ ಅಗತ್ಯತೆ ಇದೆ. ಹೀಗಾಗಿ ಈ ಶಾಲೆಯ ಚಿಂತನೆ ರಾಷ್ಟ್ರೀಯವಾದ ಆಗಿದ್ದು ಇಂತಹಾ ಶಾಲೆಗಳು ಸಮಾಜದಲ್ಲಿ ಅಭಿವೃದ್ಧಿ ಹೊಂದುವ ಅವಶ್ಯಕತೆ ಇದೆ ಎಂದು ಹೇಳಿದರು.
ಸಭಾಧ್ಯಕ್ಷತೆಯನ್ನು ಕೆ.ಕೆ.ಡಿ.ಜಿ.ಬಿ. ವಿದ್ಯಾ ಪ್ರಸಾರಕ ಮಂಡಲದ ಅಧ್ಯಕ್ಷ ಸತೀಶ್ ಪಾಟೀಲ್ರವರು ವಹಿಸಿದ್ದರು. ಕಶೆಕೋಡಿ ಶ್ರೀ ಲಕ್ಷ್ಮಿ ವೆಂಕಟೇಶ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಸುಧಾಕರ್ ಶೆಣೈ, ಮಹೇಶ್ ಠಾಕೂರ್, ಉಡುಪಿ ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಸ್ಥಾಪಕ ಅಧ್ಯಕ್ಷ ಭರತ್ ಪ್ರಭು, ಶ್ರೀ ಉಮಾಮಹೇಶ್ವರ ದೇವಸ್ಥಾನ ಅಭಿವೃದ್ದಿ ಟ್ರಸ್ಟ್ ನ ಅಧ್ಯಕ್ಷ ದಿನೇಶ್ ಪ್ರಭು, ಉಡುಪಿ ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಅಧ್ಯಕ್ಷ ವಿಷ್ಣುದಾಸ್ ಪಾಟೀಲ್, ಮಹಿಳಾ ಸಮಿತಿಯ ಅಧ್ಯಕ್ಷೆ ಶಕುಂತಳ ಶಾನುಭಾಗ್, ಮಂಡಲದ ಉಪಾಧ್ಯಕ್ಷರಾದ ರಾಧಾಕೃಷ್ಣ ಸಾಮಂತ್, ಮಂಜುನಾಥ್ ಪಾಟೀಲ್, ಸದಸ್ಯರಾದ ಸಂಜಯ್ ಪ್ರಭು ದೇವರಾಜ ಪ್ರಭು, ಎಂ ಪುರುಷೋತ್ತಮ ಪ್ರಭು ಉಪಸ್ಥಿತರಿದ್ದರು.
ಕೆಕೆಡಿಜಿಬಿ ವಿದ್ಯಾ ಪ್ರಸಾರಕ ಮಂಡಲದ ಕೋಶಾಧಿಕಾರಿ ಗೋಪಾಲಕೃಷ್ಣ ಪ್ರಭು ಸ್ವಾಗತಿಸಿ, ಕಾರ್ಯದರ್ಶಿ ಅಶೋಕ್ ಸಾಮಂತ್ ವಂದಿಸಿ, ವೆಂಕಟೇಶ್ ಪ್ರಭು ಕಾರ್ಯಕ್ರಮ ನಿರೂಪಿಸಿದರು.




By
ForthFocus™