Saturday, July 25, 2026
Saturday, July 25, 2026

ವಿಶ್ವಕರ್ಮ ಯಜ್ಞ ಮಹೋತ್ಸವ

ವಿಶ್ವಕರ್ಮ ಯಜ್ಞ ಮಹೋತ್ಸವ

Date:

ಕೋಟ, ಸೆ.17: ಸಾಲಿಗ್ರಾಮದ ಚೇಂಪಿ ವಿಶ್ವಕರ್ಮ ಸಭಾಂಗಣದಲ್ಲಿ ಕೋಟ ವಿರಾಡ್ವಿಶ್ವ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ, ವಿಶ್ವಕರ್ಮ ಕಲಾವೃಂದ ಸಾಲಿಗ್ರಾಮ, ವಿಶ್ವಜ್ಯೋತಿ ಮಹಿಳಾ ಬಳಗ ಸಾಲಿಗ್ರಾಮ ಇವರುಗಳ ಆಶ್ರಯದಲ್ಲಿ ವಿಶ್ವಕರ್ಮ ಯಜ್ಞ ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರಗಿದವು. ವಿಶ್ವಮರ್ಕ ಯಜ್ಞ ಮಹೋತ್ಸವದ ನೇತೃತ್ವವನ್ನು ವಿರಾಡ್ವಿಶ್ವ ಸಮಾಜೋದ್ಧಾರಕ ಸಂಘದ ಅಧ್ಯಕ್ಷ ಎಂ ಸುಬ್ರಾಯ ಆಚಾರ್ಯ ಮುಂದಾಳತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ಪುರೋಹಿತರಾದ ಲಕ್ಷ್ಮೀಕಾಂತ್ ಶರ್ಮ ಸಮ್ಮುಖದಲ್ಲಿ ನೆರವೇರಿತು. ಅಪರಾಹ್ನ ಮಹಾ ಅನ್ನಪ್ರಸಾದ ವಿತರಣೆ, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಪನ್ನಗೊಂಡವು.

ವಿಶ್ವಕರ್ಮ ಸಮಾಜೋದ್ಧಾರಕ ಸಂಘದ ಗೌರವಾಧ್ಯಕ್ಷ ಜನಾರ್ದನ ಆಚಾರ್ಯ ಚೇಂಪಿ, ಉಪಾಧ್ಯಕ್ಷರಾದ ಗೋವರ್ಧನ ಆಚಾರ್ಯ, ಕಾರ್ಯದರ್ಶಿ ರಮೇಶ್ ಆಚಾರ್ಯ ಚೇಂಪಿ, ಕೋಶಾಧಿಕಾರಿ ಕೃಷ್ಣಯ್ಯ ಆಚಾರ್ಯ, ಕಲಾವೃಂದದ ಅಧ್ಯಕ್ಷ ವೆಂಕಟೇಶ ಆಚಾರ್ಯ, ಕಾರ್ಯದರ್ಶಿ ನಾಗರಾಜ್ ಆಚಾರ್ಯ, ಕೋಶಾಧಿಕಾರಿ ಪದ್ಮನಾಭ ಆಚಾರ್ಯ ಬನ್ನಾಡಿ, ವಿಶ್ವಜ್ಯೋತಿ ಮಹಿಳಾ ಬಳಗದ ಅಧ್ಯಕ್ಷೆ ರಮ್ಯ ರಮೇಶ್ ಆಚಾರ್ಯ, ಕಾರ್ಯದರ್ಶಿ ಸಹನಾ ರಾಘವೇಂದ್ರ ಆಚಾರ್ಯ, ಕೋಶಾಧಿಕಾರಿ ಸುಶೀಲ ಸುರೇಶ್ ಆಚಾರ್ಯ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!