ಕಾಪು, ಸೆ.21: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ ಹಾಗೂ ಸ್ವಚ್ಛಮ್ ವಾಅಟರ್ ಅಡ್ವೆನಚರ್ಸ್ ವತಿಯಿಂದ ಕಾಪು ಬೀಚ್ನಲ್ಲಿ ವಿಶ್ವ ಕರಾವಳಿ ಶುದ್ದೀಕರಣ ದಿನ ಕಾರ್ಯಕ್ರಮ ನಡೆಯಿತು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡುತ್ತಾ,
ಕಾಪು ಕರಾವಳಿಯನ್ನು ಸ್ವಚ್ಛವಾಗಿಡುವ ಮಹತ್ವವನ್ನು ಜನರಿಗೆ ತಿಳಿಸಿ, ಸ್ವಚ್ಛ ಪರಿಸರದ ಸಂಕಲ್ಪವನ್ನು ವಿಸ್ತರಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಸ್ವಚ್ಛತೆಯನ್ನು ಕಾಪಾಡಲು ಎಲ್ಲರೂ ಕ್ರಿಯಾಶೀಲ ಪ್ರಯತ್ನಗಳನ್ನು ನಡೆಸಬೇಕು ಎಂದರು.
ಕಾಪು ಪುರಸಭೆಯ ಅಧ್ಯಕ್ಷರಾದ ಹರೀಣಾಕ್ಷಿ ದೇವಾಡಿಗ, ಉಪಾಧ್ಯಕ್ಷರಾದ ಸರೀತಾ ಶಿವಾನಂದ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಅನಿಲ್ ಕುಮಾರ್, ಪುರಸಭೆಯ ಮುಖ್ಯಾಧಿಕಾರಿಗಳಾದ ನಾಗರಾಜ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ ಉಡುಪಿಯ ಅಮೃತ, ಕಾಪು ಪುರಸಭೆಯ ಸದಸ್ಯರುಗಳಾದ ನಿತಿನ್ ಕುಮಾರ್, ಶೈಲೇಶ್ ಅಮೀನ್, ಮೋಹಿನಿ ಶೆಟ್ಟಿ, ಮುಂತಾದವರು ಉಪಸ್ಥಿತರಿದ್ದರು.




By
ForthFocus™