Tuesday, July 28, 2026
Tuesday, July 28, 2026

ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಲೋಕಾರ್ಪಣೆ

ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಲೋಕಾರ್ಪಣೆ

Date:

ಉಡುಪಿ, ಸೆ.21: ರಾಷ್ಟ್ರೀಯ ಹೆದ್ದಾರಿ 169 ಎ ಬಹುನಿರೀಕ್ಷಿತ ಉಡುಪಿ ಇಂದ್ರಾಳಿ ರೈಲ್ವೆ ಮೇಲ್ಸೇತುವೆಯನ್ನು ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಭಾನುವಾರ ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ರೈಲ್ವೆ ಕಾಮಗಾರಿಗಳಿಗೆ ವಿಶೇಷ ಒತ್ತನ್ನು ನೀಡಲಾಗುತ್ತಿದೆ. ಅಮೃತ್ ಭಾರತ್ ಯೋಜನೆಯಡಿಯಲ್ಲಿ ದೇಶಾದ್ಯಂತ ಆಯ್ದ ರೈಲು ನಿಲ್ದಾಣಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ತೀರಾ ಅಗತ್ಯವಾಗಿತ್ತು ಎಂದು ಹೇಳಿದರು.

ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡುತ್ತಾ, ಇಂದ್ರಾಳಿ ರೈಲ್ವೆ ಬ್ರಿಡ್ಜ್‌ಗೆ ಯಾವಾಗ ಮುಕ್ತಿ ಎಂದು ನೀವೆಲ್ಲಾ ಕೇಳಿದ್ರಿ. ಈಗ ಈ ಮೇಲ್ಸೇತುವೆ ಉದ್ಘಾಟನೆಗೊಂಡಿದೆ. ನೀವೆಲ್ಲರೂ ನನ್ನ ಮೇಲೆ ಹಾಕುತ್ತಿದ್ದ ಒತ್ತಡವನ್ನು ನಾನು ಸಂಬಂಧಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಹಾಕಿ ಕೆಲಸಕ್ಕೆ ವೇಗ ಕೊಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದರು.

ಶಾಸಕರಾದ ಯಶ್ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ವಿ ಸುನಿಲ್ ಕುಮಾರ್, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಪೋಲಿಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಉಡುಪಿ ನಗರಸಭೆಯ ಅಧ್ಯಕ್ಷರಾದ ಪ್ರಭಾಕರ್ ಪೂಜಾರಿ, ಉಪಾಧ್ಯಕ್ಷರಾದ ರಜನಿ ಹೆಬ್ಬಾರ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ್ ಹೇರೂರು, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು, ರೈಲ್ವೆ ಅಧಿಕಾರಿಗಳು, ನಗರಸಭಾ ಸದಸ್ಯರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!