Monday, January 19, 2026
Monday, January 19, 2026

ಬಾಲ್ಯದಲ್ಲೇ ಮಕ್ಕಳಿಗೆ ಸಂಸ್ಕಾರ ಕಲಿಸಿದರೆ ಬಲಿಷ್ಠ ಸಮಾಜ ನಿರ್ಮಾಣ: ಅದಮಾರು ಶ್ರೀಪಾದರು

ಬಾಲ್ಯದಲ್ಲೇ ಮಕ್ಕಳಿಗೆ ಸಂಸ್ಕಾರ ಕಲಿಸಿದರೆ ಬಲಿಷ್ಠ ಸಮಾಜ ನಿರ್ಮಾಣ: ಅದಮಾರು ಶ್ರೀಪಾದರು

Date:

ಕಟಪಾಡಿ, ಸೆ.22: ನೀರು ವಿದ್ಯುತ್ ಗೆ ಸರಕಾರಕ್ಕೆ ತೆರಿಗೆ ನೀಡುವ ನಾವು ಜಗತ್ತಿಗೆ ವಾಯು ಬೆಳಕು ನೀರು ನೀಡುವ ದೇವರಿಗೆ ಕೃತಜ್ಞರಾಗಿರಬೇಕು. ಅಗತ್ಯವಿದ್ದವರಿಗೆ ಅಗತ್ಯವಿರುವುದನ್ನು ಅಗತ್ಯವಿದ್ದ ಸಮಯದಲ್ಲಿ ನೀಡುವುದೇ ನಾವು ದೇವರಿಗೆ ನೀಡುವ ತೆರಿಗೆ. ಈ ಸಂಸ್ಕಾರವನ್ನು‌ ಮಕ್ಕಳಿಗೆ ಬಾಲ್ಯದಲ್ಲೇ ಕಲಿಸಿದರೆ ಬಲಿಷ್ಠ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯ ಎಂದು ಅದಮಾರು ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಹೇಳಿದರು.

ಪಾಜಕ ಆನಂದತೀರ್ಥ ವಿದ್ಯಾಲಯದಲ್ಲಿ ರಾಜ್ಯಮಟ್ಟದ ಕಬ್ ಬುಲ್ ಬುಲ್ ಉತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ಭಾರತ್ ಸೌಟ್ಸ್ ಮತ್ತು ಗೈಡ್ಸ್, ಮುಖ್ಯ ಆಯುಕ್ತ, ಮಾಜಿ ಸಚಿವ ಪಿ.ಜಿ. ಆರ್ ಸಿಂಧಿಯ ಮಾತನಾಡಿ, ಉಡುಪಿ ವಿದ್ಯೆ ಮತ್ತು ಆಹಾರ ಒದಗಿಸುವಲ್ಲಿ ರಾಷ್ಟ್ರವ್ಯಾಪಿಯಾಗಿ ಗುರುತಿಸಿಕೊಂಡಿದೆ. ರಾಜ್ಯದ ವಿವಿಧೆಡೆಯಿಂದ ಬಂದು ಆಚಾರ್ಯ ಮಧ್ವರ ಜನ್ಮಸ್ಥಳದಲ್ಲಿ ಭಾಗವಹಿಸುತ್ತಿರುವ ವಿದ್ಯಾರ್ಥಿಗಳಲ್ಲಿ ಇಲ್ಲಿನ ಸಂಸ್ಕೃತಿ ಸಂಸ್ಕಾರ ಪ್ರಭಾವಿಸುವಂತಾಗಲಿ ಎಂದರು.

ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಲ್ಲಮ್ಮ, ಭಾರತ್ ಸೌಟ್ಸ್ ಮತ್ತು ಗೈಡ್ಸ್ ಉಡುಪಿ ಜಿಲ್ಲಾ ಮುಖ್ಯ ಆಯುಕ್ತ ಜಯಕರ ಶೆಟ್ಟಿ ಇಂದ್ರಾಳಿ, ಉಡುಪಿ ಜಿಲ್ಲಾ ಸ್ಕೌಟ್ ಆಯುಕ್ತ ಜನಾರ್ದನ್ ಕೊಡವೂರು, ಗೈಡ್ ಆಯುಕ್ತೆ ಜ್ಯೋತಿ ಜೆ. ಪೈ, ಕಾರ್ಯದರ್ಶಿ ಆನಂದ್ ಬಿ ಅಡಿಗ, ಖಜಾಂಚಿ ಹರಿಪ್ರಸಾದ್ ರೈ, ಆನಂದತೀರ್ಥ ಟ್ರಸ್ಟ್ ನ ಉಪಾಧ್ಯಕ್ಷ ಹರಿಭಟ್, ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಸುಮನ್ ಶೇಖರ್ ಅತಿಥಿಗಳಾಗಿದ್ದರು.

ಭಾರತ್ ಸೌಟ್ಸ್ ಮತ್ತು ಗೈಡ್ಸ್, ಮುಖ್ಯ ಆಯುಕ್ತ ಮಾಜಿ ಸಚಿವ ಪಿ.ಜಿ. ಆರ್ ಸಿಂಧಿಯಾ ಅವರ ಹುಟ್ಟುಹಬ್ಬ ಆಚರಿಸಿ ಅಭಿನಂದಿಸಲಾಯಿತು. ಭಾರತ್ ಸೌಟ್ಸ್ ಮತ್ತು ಗೈಡ್ಸ್ ಪದಾಧಿಕಾರಿಗಳು, ಆನಂದತೀರ್ಥ ವಿದ್ಯಾಲಯದ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿ ಹಾಗೂ ವಿವಿಧ ಶಾಲಾ ಶಿಕ್ಷಕಿಯರು ಉಪಸ್ಥಿತರಿದ್ದರು.

ರಾಜ್ಯದಾದ್ಯಂತ ಸುಮಾರು 800 ವಿದಾರ್ಥಿಗಳು ಭಾಗವಹಿಸಿದ್ದರು. ಪ್ರಾಂಶುಪಾಲೆ ಡಾ. ಗೀತಾ ಶಶಿಧರ್ ಸ್ವಾಗತಿಸಿ, ರಾಜ್ಯ ಸಂಘಟನಾ ಆಯುಕ್ತ ಪ್ರಭಾಕರ್ ಭಟ್ ವಂದಿಸಿದರು. ಪೂರ್ಣಿಮಾ ಉಮಾನಾಥ್ ಪ್ರಸ್ತಾವಿಕವಾಗಿ ಮಾತನಾಡಿದರು. ಸುಮಾ ಕಿರಣ್ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಬ್ರಿ: ಆಳುಪ ನಾಗದೇವರಸನ ಶಾಸನದ ಅಧ್ಯಯನ

ಹೆಬ್ರಿ, ಜ.18: ತಾಲೂಕಿನ ಬೆಳ್ವೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಲ್ಬಾಡಿ ಪ್ರದೇಶದ...

ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾದ ಶೀರೂರು ಪರ್ಯಾಯ

ಉಡುಪಿ, ಜ.18: ಶೀರೂರು ಮಠಾಧೀಶ ಶ್ರೀ ಶ್ರೀ ವೇದವರ್ಧನ ತೀರ್ಥರು ಶ್ರೀಕೃಷ್ಣನ...

ಸರಸ್ವತಿ ವಿದ್ಯಾಲಯ: ರಾಷ್ಟ್ರೀಯ ಯುವ ದಿನಾಚರಣೆ

ಗಂಗೊಳ್ಳಿ, ಜ.18: ಸ್ವಾಮಿ ವಿವೇಕಾನಂದರ ಜೀವನವನ್ನು ಅವಲೋಕಿಸುವ ಮೂಲಕ ನಾವು ನಮ್ಮ...

ಶಿವಯೋಗಿ ಸಿದ್ಧರಾಮರ ಕಾಯಕದ ಮಹತ್ವ ಪ್ರತಿಯೊಬ್ಬರೂ ಪಾಲಿಸುವಂತಾಗಲಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಉಡುಪಿ, ಜ.18: ಕಾಯಕದ ಮಹತ್ವವನ್ನು ತಿಳಿಸಿದ ಶಿವಯೋಗಿ ಸಿದ್ದರಾಮರ ತತ್ವ ಆದರ್ಶಗಳನ್ನು...
error: Content is protected !!