Tuesday, April 28, 2026
Tuesday, April 28, 2026

ಬಡಾನಿಡಿಯೂರು: ಉಚಿತ ವೈದ್ಯಕೀಯ ಶಿಬಿರ

ಬಡಾನಿಡಿಯೂರು: ಉಚಿತ ವೈದ್ಯಕೀಯ ಶಿಬಿರ

Date:

ಉಡುಪಿ, ಅ.5: ಜೆಸಿಐ ಉಡುಪಿ ಇಂದ್ರಾಳಿ, ಜೆಸಿಐ ಅಲೂಮ್ನೈ ಕ್ಲಬ್. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ದಂತ ವೈದ್ಯಕೀಯ ವಿಭಾಗ ಕೆಎಂಸಿ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಡಾನಿಡಿಯೂರು ಇಲ್ಲಿ ಉಚಿತ ವೈದ್ಯಕೀಯ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಗ್ರೀನ್ ರೆಮಿಡಿಸ್ ಸಂಸ್ಥೆಯ ಮುಖ್ಯಸ್ಥ ಪಿ.ಎಂ.ವಿ ಹೆಬ್ಬಾರ್, ಕಾಯಿಲೆ ಬರುವ ಮುಂಚೆ ಸರಿಯಾದ ರೀತಿಯಲ್ಲಿ ಆರೋಗ್ಯ ತಪಾಸಣೆ ಮಾಡಿದ್ದಲ್ಲಿ ಉತ್ತಮ ರೀತಿಯ ಜೀವನ ಸಾಗಿಸಲು ಸಾಧ್ಯ ಹೀಗಾಗಿ ಈ ರೀತಿಯ ಶಿಬಿರಗಳು ಬಹಳಷ್ಟು ಜನರಿಗೆ ಪ್ರಯೋಜನವಾಗುತ್ತವೆ ಎಂದರು.

ಉದ್ಯಮಿ, ರಾಜಕೀಯ ಮುಖಂಡ ಪ್ರಸಾದ್ ರಾಜ್ ಕಾಂಚನ್ ಮಾತನಾಡಿ. ನಾವು ನಮ್ಮ ವಾಹನಗಳನ್ನು ಸರಿಯಾದ ರೀತಿಯಲ್ಲಿ ಕಾಪಾಡುತ್ತೇವೆ ಆದರೆ ನಮ್ಮ ಆರೋಗ್ಯದ ಕುರಿತು ನಿರ್ಲಕ್ಷ್ಯ ವಹಿಸುತ್ತೇವೆ ಇದು ಸಲ್ಲದು, ಆರೋಗ್ಯವೇ ಭಾಗ್ಯ ಎಂದರು.

ವೇದಿಕೆಯಲ್ಲಿ ಬಡಾನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಯಶೋಧಾ ಆಚಾರ್ಯ, ಸದಸ್ಯ ಪ್ರವೀಣ್ ಕಾಂಚನ್, ಒಕ್ಕೂಟದ ಅಧ್ಯಕ್ಷೆ ಸುಮಿತ್ರ ಸದಾನಂದ ಕೋಟ್ಯಾನ್, ಶಾಲಾ ಮುಖ್ಯ ಶಿಕ್ಷಕಿ ಸುನಿತಾ ಎನ್.ಎಸ್, ಪಂಡರಿನಾಥ ಭಜನಾ ಮಂಡಳಿ ಅಧ್ಯಕ್ಷ ರಾಮಪ್ಪ ಸಾಲಿಯನ್, ಡಾ. ಶ್ರಮ್ಯ ಶೆಟ್ಟಿ, ಡಾ. ದಿವ್ಯಾನಿ, ಮನು ಮುಂತಾದವರು ಉಪಸ್ಥಿತರಿದ್ದರು.

ಜೆಸಿಐ ಉಡುಪಿ ಇಂದ್ರಾಳಿ ಅಧ್ಯಕ್ಷ ರಿತೇಶ್ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಶಿಬಿರದ ನಿರ್ದೇಶಕ ಖ್ಯಾತ ವೈದ್ಯರಾದ ಡಾ. ವಿಜಯ್ ನೆಗಳೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಚಿತ್ರಾ ನೆಗಳೂರು ಸ್ವಾಗತಿಸಿದರು. ಪೂರ್ವಾಧ್ಯಕ್ಷ ಕೀರ್ತೇಶ್ ವಂದಿಸಿದರು. ರಾಘವೇಂದ್ರ ಕರ್ವಾಲು ನಿರೂಪಿಸಿದರು.
ಸುಮಾರು 100 ಕ್ಕೂ ಹೆಚ್ಚಿನ ಜನರು ಶಿಬಿರದ ಪ್ರಯೋಜನ ಪಡೆದುಕೊಂಡರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಷ್ಟ್ರೀಯ ಗೋಮಾತೆ ಗೌರವ ಅಭಿಯಾನ ಸರಕಾರಕ್ಕೆ ಮನವಿ ಸಲ್ಲಿಕೆ

ಬ್ರಹ್ಮಾವರ, ಏ.27: ಗೋಮಾತೆಯ ಗೌರವ ಅಭಿಯಾನ ಅಂಗವಾಗಿ ಗೋಮಾತಾ ಗೌರವ ದಿನಾಚರಣೆಯನ್ನು...

ಕಸ್ತೂರ್ಬಾ ಆಸ್ಪತ್ರೆ: ವೃತ್ತಿಪರರ ಸಪ್ತಾಹ 2026 ಆಚರಣೆ

ಮಣಿಪಾಲ, ಏ.27: ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲವು ಏಪ್ರಿಲ್ 25 ರಂದು ವೈದ್ಯಕೀಯ...

ಶ್ರೀ ಕೃಷ್ಣ ಮಠಕ್ಕೆ ಉತ್ತರಾಧಿ ಮಠದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದರ ಭೇಟಿ

ಉಡುಪಿ, ಏ.27: ಪರ್ಯಾಯ ಶ್ರೀ ಶೀರೂರು ಮಠ ಪರ್ಯಾಯ ಪೀಠಾಧೀಶರಾದ ಶ್ರೀ...

ನಾಗಬನದಲ್ಲಿ ಅಪೂರ್ವ ಕಾರ್ಯಕ್ರಮ

ಉಡುಪಿ, ಏ.26: ಸುಮಾರು ಒಂದು ಸಾವಿರ ವರ್ಷಗಳ ಹಳೆಯ ಶ್ರೀ ನಾಗಬ್ರಹ್ಮಸ್ಥಾನ...
error: Content is protected !!