Monday, January 19, 2026
Monday, January 19, 2026

ಮಣೂರು ಪಡುಕರೆ: ಬೀಚ್ ಸ್ವಚ್ಛತಾ ಅಭಿಯಾನ

ಮಣೂರು ಪಡುಕರೆ: ಬೀಚ್ ಸ್ವಚ್ಛತಾ ಅಭಿಯಾನ

Date:

ಪಡುಕರೆ, ಅ.6: ಗೀತಾನಂದ ಫೌಂಡೇಶನ್ ಮಣೂರು ಪಡುಕರೆ ವತಿಯಿಂದ 73ನೇ ಆನಂದ ಸೃಷ್ಟಿ ಕಾರ್ಯಕ್ರಮದ ಅಂಗವಾಗಿ, ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಜಂಟಿ ಆಯೋಜನೆಯಲ್ಲಿ ಬೀಚ್ ಸ್ವಚ್ಛತಾ ಅಭಿಯಾನ ನಡೆಯಿತುಲಾಯಿತು.

ಕಾರ್ಯಕ್ರಮದಲ್ಲಿ ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ ಸಿ ಕುಂದರ್ ಮಾತನಾಡಿ, ನಮ್ಮ ಸಂಸ್ಥೆಯ ಆನಂದ ಸೃಷ್ಟಿ ಕಾರ್ಯಕ್ರಮ ಮತ್ತು ಕಾಲೇಜಿನ ಜಂಟಿ ಆಯೋಜನೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಸ್ವಚ್ಛತೆಯ ಜೊತೆ ಜೊತೆಗೆ ಕಸಗಳನ್ನು ಬಿಸಾಡದಂತೆ ಅರಿವು ಮೂಡಿಸುವ ಕೆಲಸಗಳು ನಡೆಯಬೇಕು ಮತ್ತು ಶಿಬಿರಾರ್ಥಿಗಳ ಮನೆ ಭೇಟಿಯ ಸಮಯದಲ್ಲಿ ಇದರ ಅರಿವು ಮೂಡಿಸಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ. ರಾಜೇಂದ್ರ ನಾಯಕ ಮಾತನಾಡಿ, ಇಂದಿನ ದಿನ ಮಾನದಲ್ಲಿ ಯುವ ಜನಾಂಗ ಇಂತಹ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಸಮಾಜದಲ್ಲಿ ಉತ್ತಮ ಬದಲಾವಣೆಗಳು ಸಾಧ್ಯ ಎಂದರು.

ಜನತಾ ಸಂಸ್ಥೆಯ ಎಜಿಎಮ್ ಶ್ರೀನಿವಾಸ್ ವ್ಯವಸ್ಥಾಪಕರಾದ ಮಿಥುನ್ ಕುಮಾರ್, ಗೀತಾನಂದ ಫೌಂಡೇಶನ್ ಸಂಯೋಜಕರಾದ ರವಿಕಿರಣ್, ಕೋಟ ಪಂಚಾಯತ್ ಉಪಾಧ್ಯಕ್ಷರಾದ ಪಾಂಡು ಪೂಜಾರಿ ಮತ್ತು ಎನ್ ಎಸ್ ಎಸ್ ಯೋಜನಾಧಿಕಾರಿ ಸಂತೋಷ್ ನಾಯಕ್, ಆನಂದ ಸೃಷ್ಟಿ ತಂಡದ ಸದಸ್ಯರು, ಶಿಬಿರಾರ್ಥಿಗಳು ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಬ್ರಿ: ಆಳುಪ ನಾಗದೇವರಸನ ಶಾಸನದ ಅಧ್ಯಯನ

ಹೆಬ್ರಿ, ಜ.18: ತಾಲೂಕಿನ ಬೆಳ್ವೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಲ್ಬಾಡಿ ಪ್ರದೇಶದ...

ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾದ ಶೀರೂರು ಪರ್ಯಾಯ

ಉಡುಪಿ, ಜ.18: ಶೀರೂರು ಮಠಾಧೀಶ ಶ್ರೀ ಶ್ರೀ ವೇದವರ್ಧನ ತೀರ್ಥರು ಶ್ರೀಕೃಷ್ಣನ...

ಸರಸ್ವತಿ ವಿದ್ಯಾಲಯ: ರಾಷ್ಟ್ರೀಯ ಯುವ ದಿನಾಚರಣೆ

ಗಂಗೊಳ್ಳಿ, ಜ.18: ಸ್ವಾಮಿ ವಿವೇಕಾನಂದರ ಜೀವನವನ್ನು ಅವಲೋಕಿಸುವ ಮೂಲಕ ನಾವು ನಮ್ಮ...

ಶಿವಯೋಗಿ ಸಿದ್ಧರಾಮರ ಕಾಯಕದ ಮಹತ್ವ ಪ್ರತಿಯೊಬ್ಬರೂ ಪಾಲಿಸುವಂತಾಗಲಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಉಡುಪಿ, ಜ.18: ಕಾಯಕದ ಮಹತ್ವವನ್ನು ತಿಳಿಸಿದ ಶಿವಯೋಗಿ ಸಿದ್ದರಾಮರ ತತ್ವ ಆದರ್ಶಗಳನ್ನು...
error: Content is protected !!