Sunday, July 26, 2026
Sunday, July 26, 2026

ಮಣೂರು ಪಡುಕರೆ: ಬೀಚ್ ಸ್ವಚ್ಛತಾ ಅಭಿಯಾನ

ಮಣೂರು ಪಡುಕರೆ: ಬೀಚ್ ಸ್ವಚ್ಛತಾ ಅಭಿಯಾನ

Date:

ಪಡುಕರೆ, ಅ.6: ಗೀತಾನಂದ ಫೌಂಡೇಶನ್ ಮಣೂರು ಪಡುಕರೆ ವತಿಯಿಂದ 73ನೇ ಆನಂದ ಸೃಷ್ಟಿ ಕಾರ್ಯಕ್ರಮದ ಅಂಗವಾಗಿ, ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಜಂಟಿ ಆಯೋಜನೆಯಲ್ಲಿ ಬೀಚ್ ಸ್ವಚ್ಛತಾ ಅಭಿಯಾನ ನಡೆಯಿತುಲಾಯಿತು.

ಕಾರ್ಯಕ್ರಮದಲ್ಲಿ ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ ಸಿ ಕುಂದರ್ ಮಾತನಾಡಿ, ನಮ್ಮ ಸಂಸ್ಥೆಯ ಆನಂದ ಸೃಷ್ಟಿ ಕಾರ್ಯಕ್ರಮ ಮತ್ತು ಕಾಲೇಜಿನ ಜಂಟಿ ಆಯೋಜನೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಸ್ವಚ್ಛತೆಯ ಜೊತೆ ಜೊತೆಗೆ ಕಸಗಳನ್ನು ಬಿಸಾಡದಂತೆ ಅರಿವು ಮೂಡಿಸುವ ಕೆಲಸಗಳು ನಡೆಯಬೇಕು ಮತ್ತು ಶಿಬಿರಾರ್ಥಿಗಳ ಮನೆ ಭೇಟಿಯ ಸಮಯದಲ್ಲಿ ಇದರ ಅರಿವು ಮೂಡಿಸಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ. ರಾಜೇಂದ್ರ ನಾಯಕ ಮಾತನಾಡಿ, ಇಂದಿನ ದಿನ ಮಾನದಲ್ಲಿ ಯುವ ಜನಾಂಗ ಇಂತಹ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಸಮಾಜದಲ್ಲಿ ಉತ್ತಮ ಬದಲಾವಣೆಗಳು ಸಾಧ್ಯ ಎಂದರು.

ಜನತಾ ಸಂಸ್ಥೆಯ ಎಜಿಎಮ್ ಶ್ರೀನಿವಾಸ್ ವ್ಯವಸ್ಥಾಪಕರಾದ ಮಿಥುನ್ ಕುಮಾರ್, ಗೀತಾನಂದ ಫೌಂಡೇಶನ್ ಸಂಯೋಜಕರಾದ ರವಿಕಿರಣ್, ಕೋಟ ಪಂಚಾಯತ್ ಉಪಾಧ್ಯಕ್ಷರಾದ ಪಾಂಡು ಪೂಜಾರಿ ಮತ್ತು ಎನ್ ಎಸ್ ಎಸ್ ಯೋಜನಾಧಿಕಾರಿ ಸಂತೋಷ್ ನಾಯಕ್, ಆನಂದ ಸೃಷ್ಟಿ ತಂಡದ ಸದಸ್ಯರು, ಶಿಬಿರಾರ್ಥಿಗಳು ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!