Monday, January 19, 2026
Monday, January 19, 2026

ಕಾರಂತರ ಅಧ್ಯಯನ ಯುವಜನಾಂಗದ ಸೃಜನಶೀಲತೆಗೆ ಪ್ರೇರಣೆ: ಡಾ.ವರದೇಶ್ ಹಿರೇಗಂಗೆ

ಕಾರಂತರ ಅಧ್ಯಯನ ಯುವಜನಾಂಗದ ಸೃಜನಶೀಲತೆಗೆ ಪ್ರೇರಣೆ: ಡಾ.ವರದೇಶ್ ಹಿರೇಗಂಗೆ

Date:

ಉಡುಪಿ, ಅ.10: ಸ್ವಾತಂತ್ರ್ಯ ಪೂರ್ವದಲ್ಲಿ ಕನ್ನಡ ಸಾಹಿತ್ಯ ಕೃಷಿ ಆರಂಭಿಸಿದ ಡಾ. ಶಿವರಾಮ ಕಾರಂತರು ಈ ನೆಲದ ಸಂಸ್ಕೃತಿಯನ್ನು ತಮ್ಮ ಕೃತಿಗಳಲ್ಲಿ ಅಭಿವ್ಯಕ್ತಗೊಳಿಸಿದ್ದಾರೆ. ಇಂದಿನಯುವ ಜನಾಂಗ ಅಧ್ಯಯನ ಮಾಡಿದಲ್ಲಿ ಅವರಿಗೆ ಸೃಜನಶೀಲ ಬರವಣಿಗೆಗೆ ಪ್ರೇರಣೆಯಾಗಬಹುದು ಎಂದು ಮಾಹೆಯ ಗಾಂಧಿ ಅಧ್ಯಾಯನ ಕೇಂದ್ರ ನಿರ್ದೇಶಕ ಡಾ ವರದೇಶ್ ಹಿರೇಗಂಗೆ ಹೇಳಿದರು. ಅವರು ಕನ್ನಡ ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ನ ಯುವ ಬರಹಗಾರರ ಸಮಾವೇಶ ಮತ್ತು ಕಾರಂತ ಅಧ್ಯಯನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಎಂ.ಜಿ.ಎಂ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್. ನಾಯಕ್ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಮಾತನಾಡಿದ ಡಾ. ಕೆ ಶ್ರೀಧರ್ ಪೈ, ಆಡಳಿತ ಅಧಿಕಾರಿಗಳು, ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ ಅವರು ಕಾರಂತರ ಬಹುಮುಖ ಪ್ರತಿಭೆ ಇಂದಿನ ವಿದ್ಯಾರ್ಥಿಗಳಿಗೆ ಪರಿಚಯವಾಗಲು ಈ ಶಿಬಿರ ಪೂರಕವಾಗಿದೆ ಎಂದುಶುಭಹಾರೈಸಿದರು. ಡಾ ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷರಾದ ಡಾ. ಗಣನಾಥ ಎಕ್ಕಾರು ಆಶಯ ನುಡಿಗಳನ್ನು ಹೇಳಿದರು. ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು. ಬರಹಗಾರ್ತಿ ಸುಧಾ ಆಡುಕಳ ಮತ್ತು ಪತ್ರಕರ್ತ ನಿತ್ಯಾನಂದ ಪಡ್ರೆ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು ಪ್ರಸೀಜ, ಪ್ರಜ್ಞಾ, ಭೂಮಿಕ ತಂಡದವರು ನಾಡಗೀತೆಯನ್ನು ಹಾಡಿದರು. ಪೂರ್ಣಿಮಾ ಸ್ವಾಗತಿಸಿ ಪ್ರಜ್ಞಾ ವಂದಿಸಿದರು. ಮಧುರ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಬ್ರಿ: ಆಳುಪ ನಾಗದೇವರಸನ ಶಾಸನದ ಅಧ್ಯಯನ

ಹೆಬ್ರಿ, ಜ.18: ತಾಲೂಕಿನ ಬೆಳ್ವೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಲ್ಬಾಡಿ ಪ್ರದೇಶದ...

ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾದ ಶೀರೂರು ಪರ್ಯಾಯ

ಉಡುಪಿ, ಜ.18: ಶೀರೂರು ಮಠಾಧೀಶ ಶ್ರೀ ಶ್ರೀ ವೇದವರ್ಧನ ತೀರ್ಥರು ಶ್ರೀಕೃಷ್ಣನ...

ಸರಸ್ವತಿ ವಿದ್ಯಾಲಯ: ರಾಷ್ಟ್ರೀಯ ಯುವ ದಿನಾಚರಣೆ

ಗಂಗೊಳ್ಳಿ, ಜ.18: ಸ್ವಾಮಿ ವಿವೇಕಾನಂದರ ಜೀವನವನ್ನು ಅವಲೋಕಿಸುವ ಮೂಲಕ ನಾವು ನಮ್ಮ...

ಶಿವಯೋಗಿ ಸಿದ್ಧರಾಮರ ಕಾಯಕದ ಮಹತ್ವ ಪ್ರತಿಯೊಬ್ಬರೂ ಪಾಲಿಸುವಂತಾಗಲಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಉಡುಪಿ, ಜ.18: ಕಾಯಕದ ಮಹತ್ವವನ್ನು ತಿಳಿಸಿದ ಶಿವಯೋಗಿ ಸಿದ್ದರಾಮರ ತತ್ವ ಆದರ್ಶಗಳನ್ನು...
error: Content is protected !!