Saturday, June 13, 2026
Saturday, June 13, 2026

ಅ.17, 18- ಉಡುಪಿ ಜಿಲ್ಲೆಯ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಅ.17, 18- ಉಡುಪಿ ಜಿಲ್ಲೆಯ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

Date:

ಉಡುಪಿ ಅ.೧೫: ಅ.17ರಂದು ಬೆಳಿಗ್ಗೆ 9.30 ರಿಂದ ಸಂಜೆ 5:30 ಗಂಟೆಯವರೆಗೆ ಕುಂದಾಪುರ/ಹಾಲಾಡಿ/ಬೆಳ್ವೆ/ಹೈಕಾಡಿ/ಬಿದ್ಕಲ್ ಕಟ್ಟೆ/ಆವರ್ಸೆ ವ್ಯಾಪ್ತಿಯಲ್ಲಿ 110/11ಕೆ.ವಿ ಹಾಲಾಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಬೆಳ್ವೆ, ಹೈಕಾಡಿ,ಬಿದ್ಕಲ್‌ಕಟ್ಟೆ ಮತ್ತು ಆವರ್ಸೆ ಮಾರ್ಗಗಳಲ್ಲಿ ಪಾಲನಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳ್ವೆ, ಅಲ್ಬಾಡಿ, ಆರ್ಡಿ, ಹೆಂಗವಳ್ಳಿ, ಸೂರ್ಗೋಳಿ, ಶೇಡಿಮನೆ, ಹೈಕಾಡಿ, ಗೋಳಿಯಂಗಡಿ, ರಟ್ಟಾಡಿ, ಮಾವಿನಕೊಡ್ಲು, ಹೆಮ್ಮಣ್ಣು, ಅಮಾಸೆಬೈಲು, ಜಡ್ಡಿನಗದ್ದೆ, ತೊಂಬಟ್ಟು, ಬಳ್ಮನೆ, ಬಿದ್ಕಲ್‌ಕಟ್ಟೆ, ಮೊಳಹಳ್ಳಿ, ಹಾರ್ದಳ್ಳಿ-ಮಂಡಳ್ಳಿ, ಯಡಾಡಿ-ಮತ್ಯಾಡಿ ಮತ್ತು ಹಾಲಾಡಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಅ.18ರಂದು ಬೆಳಿಗ್ಗೆ 10.00 ರಿಂದ ಸಂಜೆ 5:00 ಗಂಟೆಯವರೆಗೆ ಉಡುಪಿ/ಹಿರಿಯಡ್ಕ/ಬಜೆ/ಪೆರ್ಡೂರು ವ್ಯಾಪ್ತಿಯಲ್ಲಿ 110/33/11 ಕೆವಿ ಹಿರಿಯಡ್ಕ ವಿದ್ಯುತ್ ಉಪಕೇಂದ್ರದಲ್ಲಿ 110/11ಕೆವಿ 10 ಎಂವಿಎ ಶಕ್ತಿ ಪರಿವರ್ತಕಕ್ಕೆ ಸಂಬಂಧಿಸಿದ 11ಕೆವಿ ಬ್ಯಾಂಕ್ ಸಿಟಿಗಳನ್ನು ಬದಲಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ಸದರಿ ಉಪಕೇಂದ್ರದಿಂದ ಹೊರಡುವ 11ಕೆವಿ ಹಿರಿಯಡ್ಕ, ಬಜೆ, ಪೆರ್ಡೂರು, ಮಾಣೈ, ಹಿರೇಬೆಟ್ಟು ಫೀಡರ್ ಮಾರ್ಗದಲ್ಲಿ ಬಜೆ ವಾಟರ್ ಸಪ್ಲೈ, ಹಿರಿಯಡ್ಕ ಪೇಟೆ, ಪಾಪುಜೆ, ಬಜೆ, ಗುಡ್ಡೆಯಂಗಡಿ, ಕೊಂಡಾಡಿ, ಕೋಡಿಬೆಟ್ಟು, ಪೆರ್ಣಂಕಿಲ, ಕಣಂಜಾರು, ಕಾಜರಗುತ್ತು, ಹರಿಖಂಡಿಗೆ, ವಡ್ಜ, ಸಾಣೆಕಲ್ಲು, ಮಾಣೈ ನವಗ್ರಾಮ, ಪಂಚನಬೆಟ್ಟು, ಮೂಂಡುಜೆ, ಪುತ್ತಿಗೆ, ಪಕ್ಕಾಲು, ಪೆರ್ಡೂರು ಪೇಟೆ, ಮುತ್ತೂರ್ಮೆ, ಕುಕ್ಕೆಹಳ್ಳಿ, ಪಾಡಿಗಾರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಅ.18 ರಂದು ಬೆಳಿಗ್ಗೆ 9.00 ರಿಂದ ಸಂಜೆ 5:00 ಗಂಟೆಯವರೆಗೆ ಮಣಿಪಾಲ/ಅನಂತನಗರ/ಇಂದ್ರಾಳಿ/ಪ್ರಗತಿನಗರ ವ್ಯಾಪ್ತಿಯಲ್ಲಿ 110/33/11 ಕೆವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಅನಂತನಗರ, ಇಂದ್ರಾಳಿ, ಪ್ರಗತಿನಗರ ಮತ್ತು ಮೂಡುಬೆಳ್ಳೆ ಫೀಡರ್ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಹುಡ್ಕೋ, ಅನಂತನಗರ, ಕಲ್ಯಾಣನಗರ, ಸೋನಿಯಾ ಕ್ಲಿನಿಕ್, ಹಯಗ್ರೀವನಗರ, ಲಕ್ಷ್ಮೀಂದ್ರನಗರ, ಇಂದ್ರಾಳಿ ರೈಲ್ವೆ ನಿಲ್ದಾಣ, ಪ್ರಗತಿನಗರ, ಶಾಂತಿನಗರ, ರಾಜೀವ ನಗರ, 80 ಬಡಗುಬೆಟ್ಟು, ಮಣಿಪುರ, ಮೂಡುಬೆಳ್ಳೆ, ಮರ್ಣೆ, ಕಟ್ಟಿಂಗೇರಿ, ಕೆಮ್ತೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಭೇಟಿ

ಕೊಲ್ಲೂರು, ಜೂ.12: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಶುಕ್ರವಾರ ಕೊಲ್ಲೂರು...

‘ಯಶೋ ಮಾಧ್ಯಮ-2026’ ಪ್ರಶಸ್ತಿಗೆ ಸುಬ್ರಹ್ಮಣ್ಯ ಜಿ ಕುರ್ಯ ಆಯ್ಕೆ

ಉಡುಪಿ, ಜೂ.12: ರಾಜಾಜಿನಗರದ ಸ್ಪಂದನ ಸೇವಾ ಸಂಸ್ಥೆ ವತಿಯಿಂದ ಪ್ರತಿ ವರ್ಷದಂತೆ...

ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಮತ್ತು ಭಾರತೀಯ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ಇನ್ನು ನೆನಪು ಮಾತ್ರ

ನವದೆಹಲಿ, ಜೂ.12: ಏಷ್ಯನ್ ಗೇಮ್ಸ್ ಮತ್ತು ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಹಲವಾರು...

ಕೋಡಿಯಲ್ಲಿ ಹಸಿರು ಹೆಜ್ಜೆ ಅಭಿಯಾನಕ್ಕೆ ಚಾಲನೆ

ಕೋಟ, ಜೂ.12: ದೇಶದೆಲ್ಲೆಡೆ ತಾಪಮಾನ ಹೆಚ್ಚುತ್ತಿದೆ. ಕಾಡೆಲ್ಲ ನಾಡಾಗಿ ಪರಿವರ್ತನೆಗೊಂಡಿದ್ದು ಇದರಿಂದ...
error: Content is protected !!