Saturday, January 17, 2026
Saturday, January 17, 2026

ಸ್ನೇಹಕೂಟ ದಶಮ ಸಂಭ್ರಮ ಪೂರ್ವಭಾವಿ ಸಭೆ

ಸ್ನೇಹಕೂಟ ದಶಮ ಸಂಭ್ರಮ ಪೂರ್ವಭಾವಿ ಸಭೆ

Date:

ಕೋಟ, ಅ.17: ಸ್ನೇಹಕೂಟ ಮಣೂರು ಇದರ ದಶಮ ಸಂಭ್ರಮ ಡಿಸೆಂಬರ್ 25ರಂದು ನಡೆಯಲಿದ್ದು ಇದರ ಪೂರ್ವಭಾವಿ ಸಭೆ ಮಣೂರು ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಜರಗಿತು.
ಸಭೆಯ ಅಧ್ಯಕ್ಷತೆಯನ್ನು ದಶಮಾನೋತ್ಸವ ಸಮಿತಿ ಅಧ್ಯಕ್ಷ ಆನಂದ್ ಸಿ ಕುಂದರ್ ವಹಿಸಿ ಸಲಹೆ ಸೂಚನೆ ನೀಡಿದರು. ಸ್ನೇಹಕೂಟ ಸಂಚಾಲಕಿ ಭಾರತಿ ವಿ ಮಯ್ಯ ದಶಮಾನೋತ್ಸವ ಕಾರ್ಯಕ್ರಮಗಳ ರೂಪುರೇಷೆಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ಸಭೆಯಲ್ಲಿ ಮಣೂರು ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಸತೀಶ್ ಹೆಚ್ ಕುಂದರ್, ದಶಮಾನೋತ್ಸವ ಸಮಿತಿಯ ಪ್ರಮುಖರಾದ ಎಂ ಎನ್ ಮಧ್ಯಸ್ಥ, ನೀಲಾವರ ಸುರೇಂದ್ರ ಅಡಿಗ, ವಿಷ್ಣುಮೂರ್ತಿ ಮಯ್ಯ, ಅರುಣಾಚಲ ಮಯ್ಯ, ಶ್ರೀಕಾಂತ್ ಶೆಣೈ, ಕೆ.ತಾರಾನಾಥ ಹೊಳ್ಳ, ಸದಾಶಿವ ಹೊಳ್ಳ ಸೇರಿದಂತೆ ಹಲವರು ಭಾಗಿಯಾದರು. ಸ್ನೇಹಕೂಟದ ಸುಜಾತ ಬಾಯರಿ ಸ್ವಾಗತಿಸಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!