Saturday, September 5, 2026
Saturday, September 5, 2026

ಕಾಪು ಹೊಸಮಾರಿಗುಡಿ ದೇವಸ್ಥಾನಕ್ಕೆ ಸಿ.ಟಿ ರವಿ ಭೇಟಿ

ಕಾಪು ಹೊಸಮಾರಿಗುಡಿ ದೇವಸ್ಥಾನಕ್ಕೆ ಸಿ.ಟಿ ರವಿ ಭೇಟಿ

Date:

ಕಾಪು, ಅ.19: ಮಾಜಿ ಸಚಿವ ಮತ್ತು ವಿಧಾನ ಪರಿಷತ್ ಸದಸ್ಯರಾದ ಸಿ.ಟಿ ರವಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀದೇವಿಯ ದರ್ಶನ ಪಡೆದರು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅಮ್ಮನ ಅನುಗ್ರಹ ಪ್ರಸಾದ ನೀಡಿದರು. ಕಾಪು ಶಾಸಕ ಮತ್ತು ದೇವಳದ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿಯವರ ಸಮಕ್ಷಮದಲ್ಲಿ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಅವರನ್ನು ಗೌರವಿಸಲಾಯಿತು.

ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಐತಿಹ್ಯ ಇರುವಂತೆ ಹಿಂದೆ ವಿಜಯನಗರ ಸಾಮ್ರಾಜ್ಯದಲ್ಲಿ ಕೆಳದಿಯ ಅರಸರ ದಂಡನ್ನ ಆಶೀರ್ವದಿಸಿ ದಂಡಿನ ಮಾರಿಯಾಗಿ, ಸೈನ್ಯಕ್ಕೆ ರಕ್ಷಣೆಯನ್ನ ಮತ್ತು ಜಯವನ್ನು ಒದಗಿಸಿಕೊಟ್ಟ ತಾಯಿ ಕಾಪುವಿನಲ್ಲಿ ನೆಲೆಸಿ ಭಕ್ತರನ್ನ ಹರಸುತ್ತಾ ಬಂದಿದ್ದಾರೆ. ಸಮಿತಿಯವರು ದೇವಳವನ್ನು ಜೀರ್ಣೋದ್ಧಾರ ಮಾಡಿ ಆ ತಾಯಿಯ ಸೇವೆಯನ್ನು ಮಾಡ್ತಾ ಇದ್ದಾರೆ ಎಂದರು.

ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಮತ್ತು ಘಂಟಾನಾದ ಸೇವಾ ಸಮಿತಿಯ ಅಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ಜಿತೇಂದ್ರ ಶೆಟ್ಟಿ ಉದ್ಯಾವರ, ಅನಿಲ್ ಕುಮಾರ್ ಕಾಪು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!